ನಿಪ್ಪಾಣಿ: ಖಾಸಗಿ ಬಸ್ನಲ್ಲಿ ಪ್ರಯಾನಿಕನೊಬ್ಬ ಶನಿವಾರ ಮಧ್ಯರಾತ್ರಿ 2 ಗಂಟೆ ಸುಮಾರಿಗೆ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ₹12.49 ಲಕ್ಷ ಹಣವನ್ನು ತಾಲ್ಲೂಕಿನ ಕೊಗನೊಳಿ ಚೆಕ್ಪೋಸ್ಟ್ನಲ್ಲಿ ಎಸ್ಎಸ್ಟಿ ತಂಡದ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಹೊಸಪೇಟೆಯ ಕೆ. ಕಾರ್ತಿಕ (20) ಎಂಬುವರ ಬಳಿ ₹500 ಮುಖಬೆಲೆಯ 2,498 ನೋಟುಗಳನ್ನು ವಶಪಡಿಸಿಕೊಳ್ಳಲಾಗಿದೆ. ಮುಂಬೈ– ಬಳ್ಳಾರಿ ಮಾರ್ಗದ ಸಿಟಿಜನ್ ಟ್ರಾವೆಲ್ಸ್ನಲ್ಲಿ ಅವರು ಪುಣೆಯಿಂದ ಹೊಸಪೇಟೆಗೆ ತೆರಳುತ್ತಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.