ADVERTISEMENT

ಗವಿಮಠಗೆ ಕಯ್ಯಾರ ಕಿಞ್ಞಣ್ಣ ರೈ ಗಡಿನಾಡ ಚೇತನ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 2 ಮಾರ್ಚ್ 2024, 5:57 IST
Last Updated 2 ಮಾರ್ಚ್ 2024, 5:57 IST
ಗವಿಮಠ
ಗವಿಮಠ   

ಬೆಳಗಾವಿ: ಕನ್ನಡ ಗಡಿ ಅಭಿವೃದ್ಧಿ ಪ್ರಾಧಿಕಾರ ನೀಡುವ ‘ಕಯ್ಯಾರ ಕಿಞ್ಞಣ್ಣ ರೈ ಗಡಿನಾಡ ಚೇತನ’ ಪ್ರಶಸ್ತಿಗೆ ಇಲ್ಲಿನ ಲೇಖಕ ಬಿ.ಎಸ್.ಗವಿಮಠ ಆಯ್ಕೆಯಾಗಿದ್ದಾರೆ.

ಬೆಂಗಳೂರಿನಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಸಾಹಿತಿಗಳಾದ ಬರಗೂರು ರಾಮಚಂದ್ರಪ್ಪ, ಸರಜೂ ಕಾಟ್ಕರ್ ನೇತೃತ್ವದ ಸಮಿತಿಯು ಗವಿಮಠ ಅವರನ್ನು ಆಯ್ಕೆ ಮಾಡಿತು. ಪ್ರಶಸ್ತಿ ₹1 ಲಕ್ಷ ನಗದು ಒಳಗೊಂಡಿದೆ.

50 ವರ್ಷಗಳಿಂದ ಸಾಹಿತ್ಯ ಕ್ಷೇತ್ರದಲ್ಲಿ ತೊಡಗಿರುವ ಅವರು, 50ಕ್ಕೂ ಹೆಚ್ಚು ಕೃತಿಗಳನ್ನು ಬರೆದಿದ್ದಾರೆ. ಇತಿಹಾಸ, ಜೀವನ ಚರಿತ್ರೆ, ಸಂಶೋಧನೆ ಅವರ ನೆಚ್ಚಿನ ಕ್ಷೇತ್ರಗಳು. 36 ವರ್ಷ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸಿದ ಅವರು, ಗಡಿ ಕನ್ನಡಿಗರ ಧ್ವನಿಯಾಗಿ ಕೆಲಸ ಮಾಡಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.