ಬೆಳಗಾವಿ: ನಗರದಲ್ಲಿ ಮಂಗಳವಾರ ತಡರಾತ್ರಿ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ, ರಾಣಿ ಚನ್ನಮ್ಮ ವೃತ್ತದಲ್ಲಿ ಯುವಕರ ಮೇಲೆ ಅಪರಿಚಿತರ ಗುಂಪೊಂದು ಚಾಕುವಿನಿಂದ ದಾಳಿ ಮಾಡಿದೆ.
ಘಟನೆಯಲ್ಲಿ ದರ್ಶನ್ ಪಾಟೀಲ, ಸತೀಶ ಪೂಜಾರಿ, ಪ್ರವೀಣ್ ಗುಂಡ್ಯಾಗೋಳಗೆ ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೂವರು ಯುವಕರ ಹೊಟ್ಟೆ ಭಾಗಕ್ಕೆ ಭಾರವಾಗಿ ಚೂರಿಯಿಂದ ಇರಿದ ಆರೋಪಿಗಳು ಪರಾರಿಯಾದರು ಎಂದು ಪ್ರತ್ಯಕ್ಷ್ಯದರ್ಶಿಗಳು ತಿಳಿಸಿದರು.
ರಕ್ತಸ್ರಾವದಿಂದ ತೀವ್ರ ಅಸ್ವಸ್ಥರಾಗಿದ್ದ ಯುವಕರನ್ನು ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಜಿಲ್ಲಾಸ್ಪತ್ರೆಗೆ ಎಪಿಎಂಸಿ ಠಾಣೆ ಪೊಲೀಸರ ಭೇಟಿ, ಘಟನೆ ಬಗ್ಗೆ ಮಾಹಿತಿ ಸಂಗ್ರಹಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.