ADVERTISEMENT

ಹಿರೇಬಾಗೇವಾಡಿ: ಕೆರೆ ಅಭಿವೃದ್ಧಿ ಕಾಮಗಾರಿಗೆ ಸಚಿವೆ ಹೆಬ್ಬಾಳಕರ ಭೂಮಿ ಪೂಜೆ 

​ಪ್ರಜಾವಾಣಿ ವಾರ್ತೆ
Published 17 ಅಕ್ಟೋಬರ್ 2024, 15:27 IST
Last Updated 17 ಅಕ್ಟೋಬರ್ 2024, 15:27 IST
ಹಿರೇಬಾಗೇವಾಡಿ ಸಮೀಪದ ಕೆ.ಕೆ.ಕೊಪ್ಪ ಗ್ರಾಮದ ಕೆರೆಯ ಅಭಿವೃದ್ಧಿ ಕಾಮಗಾರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಬುಧವಾರ ಭೂಮಿಪೂಜೆ ನೆರವೇರಿಸಿದರು
ಹಿರೇಬಾಗೇವಾಡಿ ಸಮೀಪದ ಕೆ.ಕೆ.ಕೊಪ್ಪ ಗ್ರಾಮದ ಕೆರೆಯ ಅಭಿವೃದ್ಧಿ ಕಾಮಗಾರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಬುಧವಾರ ಭೂಮಿಪೂಜೆ ನೆರವೇರಿಸಿದರು   

ಹಿರೇಬಾಗೇವಾಡಿ: ಇಲ್ಲಿಗೆ ಸಮೀಪದ ಕೆ.ಕೆ ಕೊಪ್ಪ ಗ್ರಾಮದ ಕೆರೆ ಅಭಿವೃದ್ಧಿ ಕಾಮಗಾರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಬುಧವಾರ ಭೂಮಿಪೂಜೆ ನೆರವೇರಿಸಿದರು.

‘ಗುತ್ತಿಗೆದಾರರಿಗೆ ಮತ್ತು ಅಧಿಕಾರಿಗಳಿಗೆ ನಿಗದಿತ ಸಮಯದಲ್ಲಿ ಗುಣಮಟ್ಟದ ಕಾಮಗಾರಿ ನಡೆಸಲು ಸೂಚನೆ ನೀಡಲಾಗಿದ್ದು, ಗ್ರಾಮಸ್ಥರು ಕೂಡ ಕೆಲಸದ ಮೇಲೆ ನಿಗಾವಹಿಸಬೇಕು ಎಂದು ಸಚಿವೆ ಹೇಳಿದರು.

ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿರುವ ಸಿದ್ಧೇಶ್ವರ ದೇವಸ್ಥಾನ ಕಟ್ಟಡದ ಪ್ರಗತಿ ಪರಿಶೀಲನೆ ನಡೆಸಿದರು.

ADVERTISEMENT

ಬಾಗೇವಾಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಸಿ ಪಾಟೀಲ, ಶ್ರೀಕಾಂತ ಮಧುಭರಮಣ್ಣವರ, ಸುರೇಶ ಇಟಗಿ, ಸಂತೋಷ ಕಂಬಿ, ಸುರೇಶ ಕಂಬಿ, ರಾಮನಗೌಡ ಪಾಟೀಲ, ಬಸವರಾಜ ಡೊಂಗರಗಾವಿ, ಅಪ್ಪುರಾಯ ನಂದಿ, ಈರಣ್ಣ ಚಿನ್ನಣ್ಣವರ, ಆನಂದ ಮುಖಾಸಿ, ವಿನಾಯಕ ಪಾಟೀಲ, ಶಿವು ಕಂಬಿ ಗ್ರಾ.ಪಂ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.