ADVERTISEMENT

ಎರಡು ಬೈಕ್‌ ಡಿಕ್ಕಿ: ಮೂವರ ಸಾವು

​ಪ್ರಜಾವಾಣಿ ವಾರ್ತೆ
Published 17 ಜೂನ್ 2024, 15:48 IST
Last Updated 17 ಜೂನ್ 2024, 15:48 IST
   

ರಾಯಬಾಗ : ಎರಡು ಬೈಕ್‌ಗಳ ಡಿಕ್ಕಿಯಲ್ಲಿ ಮೂವರು ಮತಪಟ್ಟು, ಮಗುವೊಂದು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮುಧೋಳ–ನಿಪ್ಪಾಣಿ ರಾಜ್ಯ ಹೆದ್ದಾರಿಯ ಕಂಕಣವಾಡಿ ಬಳಿ ಭಾನುವಾರ ತಡರಾತ್ರಿ ನಡೆದಿದೆ.

ಘಟನೆಯಲ್ಲಿ ಕಂಕಣವಾಡಿ ಗ್ರಾಮದ ಸುಕದೇವ ರಾಯಪ್ಪ ಪೂಜಾರಿ (60), ಚಿಮ್ಮಡ ಗ್ರಾಮದ ನಿವಾಸಿಗಳಾದ ಸದಾಶಿವ ಹಣಮಂತ ದೊಡಮನಿ (45), ಕಿರಣ ಸದಾಶಿವ ದೊಡಮನಿ(20) ಮೃತಪಟ್ಟಿದ್ದಾರೆ. ಘಟನೆ ಕುರಿತು ರಾಯಬಾಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT