ADVERTISEMENT

‘ಬಿಜೆಪಿ ಸದಸ್ಯತ್ವ ಅಭಿಯಾನ ಚುರುಕು’

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2024, 14:30 IST
Last Updated 24 ಸೆಪ್ಟೆಂಬರ್ 2024, 14:30 IST
ಬೈಲಹೊಂಗಲ ವಿಜಯ ಸೋಶಿಯಲ್ ಕ್ಲಬ್ ಆವರಣದಲ್ಲಿ ಸೋಮವಾರ ಮತಕ್ಷೇತ್ರದ ಬೂತಮಟ್ಟದ ಬಿಜೆಪಿ ಪ್ರಮುಖರ ಮತ್ತು ಕಾರ್ಯಕರ್ತರ ಸಂವಾದ ನಡೆಯಿತು
ಬೈಲಹೊಂಗಲ ವಿಜಯ ಸೋಶಿಯಲ್ ಕ್ಲಬ್ ಆವರಣದಲ್ಲಿ ಸೋಮವಾರ ಮತಕ್ಷೇತ್ರದ ಬೂತಮಟ್ಟದ ಬಿಜೆಪಿ ಪ್ರಮುಖರ ಮತ್ತು ಕಾರ್ಯಕರ್ತರ ಸಂವಾದ ನಡೆಯಿತು   

ಬೈಲಹೊಂಗಲ: 'ಬೈಲಹೊಂಗಲ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ ಕಾರ್ಯ ಭರದಿಂದ ಸಾಗಿದ್ದು, ಜಿಲ್ಲೆಯಲ್ಲೆ ಹೆಚ್ಚು ಸದಸ್ಯತ್ವ ಆಗುವ ನಿರೀಕ್ಷೆ ಇದೆ' ಎಂದು ಬಿಜೆಪಿ ನಿಕಟಪೂರ್ವ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ಮಹೇಶ ಟೆಂಗಿನಕಾಯಿ ಭರವಸೆ ವ್ಯಕ್ತಪಡಿಸಿದರು.

ಪಟ್ಟಣದ ವಿಜಯ ಸೋಶಿಯಲ್ ಕ್ಲಬ್ ಆವರಣದಲ್ಲಿ ಸೋಮವಾರ ನಡೆದ ಬೈಲಹೊಂಗಲ ಮತಕ್ಷೇತ್ರದ ಬೂತಮಟ್ಟದ ಬಿಜೆಪಿ ಪ್ರಮುಖರ ಮತ್ತು ಕಾರ್ಯಕರ್ತರ ಸಂವಾದದಲ್ಲಿ ಮಾತನಾಡಿದರು.

ಮಾಜಿ ಶಾಸಕರಾದ ವಿಶ್ವನಾಥ ಪಾಟೀಲ, ಜಗದೀಶ ಮೆಟಗುಡ್ಡ ಮಾತನಾಡಿ, 'ದೇಶದಲ್ಲಿ ಬಿಜೆಪಿ ಜನಪರವಾಗಿದೆ. ಬಹುತೇಕರು ಇಷ್ಟಪಡುವ ಪಕ್ಷವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಯೋಗ್ಯ ನೇತೃತ್ವದಿಂದ ಗೌರವ ಹೆಚ್ಚಾಗಿದೆ. ಬೈಲಹೊಂಗಲ ನಾಡಿನಲ್ಲೂ ಹೆಚ್ಚು ಸಂಖ್ಯೆಯಲ್ಲಿ ಬಿಜೆಪಿ ಸದಸ್ಯತ್ವ ಪಡೆದು ಅಭಿಯಾನ ಯಶಸ್ವಿಗೊಳಿಸಲಾಗುವುದು' ಎಂದು ತಿಳಿಸಿದರು.

ADVERTISEMENT

ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಸ ಪಾಟೀಲ, ಉದ್ಯಮಿ ವಿಜಯ ಮೆಟಗುಡ್ಡ, ಜಿಲ್ಲಾ ಕಾರ್ಯದರ್ಶಿ ಗುರು ಮೆಟಗುಡ್ಡ, ಬಿಜೆಪಿ ಮಂಡಲ ಅಧ್ಯಕ್ಷ ಸುಭಾಸ ತುರಮರಿ, ಗುರುಪಾದ ಕಳ್ಳಿ, ಎಫ್.ಎಸ್. ಸಿದ್ಧನಗೌಡರ, ಪುರಸಭೆ ಸದಸ್ಯ ಶಿವಾನಂದ ಕೋಲಕಾರ, ಜಗದೀಶ ಜಂಬಗಿ, ಮುಖಂಡರಾದ ಸುನೀಲ ಮರಕುಂಬಿ, ವಿಶಾಲ ಬೋಗೂರ, ದಾದಾಗೌಡ ಬಿರಾದಾರ, ಲಕ್ಕಪ್ಪ ಕಾರಗಿ ವೇದಿಕೆಯಲ್ಲಿದ್ದರು. ನೂರಾರು ಬಿಜೆಪಿ ಕಾರ್ಯಕರ್ತರು ಇದ್ದರು.

ಜಗದೀಶ ಬೂದಿಹಾಳ ಸ್ವಾಗತಿಸಿದರು. ಸಂತೋಷ ಹಡಪದ ನಿರೂಪಿಸಿದರು. ಮಂಜು ಜೋರಾಪೂರ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.