ಬೆಳಗಾವಿ: ಖಾನಾಪುರ ರೈಲ್ವೆ ಸೇತುವೆ ಬಳಿ ಗೋವಾ ಮಾರ್ಗದ ರಾಷ್ಟ್ರೀಯ ಹೆದ್ದಾರಿ ಮೇಲೆ ವೇಗವಾಗಿ ಚಲಿಸುತ್ತಿದ್ದ ಕಾರಿನ ಟೈರ್ ಸಿಡಿದು ಬೈಕಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಬೈಕ್ ಚಾಲಕ ಹಾಗೂ ಕಾರ್ ಚಾಲಕ ಮೃತಪಟ್ಟಿದ್ದಾರೆ. ಏಳು ಮಂದಿ ತೀವ್ರ ಗಾಯಗೊಂಡಿದ್ದಾರೆ.
ಕಾರಿನ ಹಿಂಬದಿ ಟೈರ್ ಸಿಡಿದಿದ್ದರಿಂದ ಕಾರು ಚಾಲಕನ ನಿಯಂತ್ರಣ ತಪ್ಪಿತು. ಮುಂದೆ ಸಾಗುತ್ತಿದ್ದ ಬೈಕಿಗೆ ಡಿಕ್ಕಿ ಹೊಡೆದಿದ್ದರಿಂದ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದರು. ಕಾರ್ ಪಲ್ಟಿಯಾಗಿ ಅದರಲ್ಲಿದ್ದ ಎಂಟು ಮಂದಿ ಗಾಯಗೊಂಡರು. ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಚಾಲಕ ಮೃತಪಟ್ಟರು. ಉಳಿದವರನ್ನು ಬೆಳಗಾವಿಯ ಬೇರೆಬೇರೆ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
ಖಾನಾಪುರ ಠಾಣೆ ಪೊಲೀಸರು ಸ್ಥಳ ಮಹಜರು ನಡೆಸಿದರು. ಮೃತರು ಹಾಗೂ ಗಾಯಗೊಂಡವರ ವಿವರ ಹೊತ್ತಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.