ಬೆಳಗಾವಿ: ಜಿಲ್ಲೆಯಲ್ಲಿ ಏ.28, 30ರಂದು ನಡೆಯಲಿರುವ ಕಾಂಗ್ರೆಸ್ ಅಭ್ಯರ್ಥಿಗಳ ಪ್ರಚಾರ ಸಭೆಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸುವರು.
28ರಂದು ಬೆಳಿಗ್ಗೆ 11.30ಕ್ಕೆ ಕಾಗವಾಡ ತಾಲ್ಲೂಕಿನ ಉಗಾರ ಖುರ್ದ್ನಲ್ಲಿ ಪ್ರಿಯಾಂಕಾ ಜಾರಕಿಹೊಳಿ ಪರವಾಗಿ, ಮಧ್ಯಾಹ್ನ 2.30ಕ್ಕೆ ಯರಗಟ್ಟಿಯಲ್ಲಿ ಮೃಣಾಲ್ ಹೆಬ್ಬಾಳಕರ ಪರವಾಗಿ ಪ್ರಚಾರ ಕೈಗೊಳ್ಳುವರು. 30ರಂದು ಬೆಳಿಗ್ಗೆ 11 ಗಂಟೆಗೆ ಚಿಕ್ಕೋಡಿಯಲ್ಲಿ ಪ್ರಿಯಾಂಕಾ ಪರ ಮತ್ತು ಮಧ್ಯಾಹ್ನ 2.45ಕ್ಕೆ ಗೋಕಾಕದಲ್ಲಿ ಮೃಣಾಲ್ ಪರ ಪ್ರಚಾರ ನಡೆಸುವರು ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.