ಬೆಳಗಾವಿ: ‘ತಾಲ್ಲೂಕಿನ ಕಾಕತಿಯ ಹೋಟೆಲ್ನಲ್ಲಿ ಮಾ.4ರಂದು ರಾತ್ರಿ 9ಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ನೇತೃತ್ವದಲ್ಲಿ ಬೆಳಗಾವಿ, ಚಿಕ್ಕೋಡಿ, ವಿಜಯಪುರ ಮತ್ತು ಬಾಗಲಕೋಟೆ ಲೋಕಸಭೆ ಕ್ಷೇತ್ರಗಳ ಕೋರ್ ಕಮಿಟಿ ಸಭೆ ನಡೆಯಲಿದೆ’ ಎಂದು ಪಕ್ಷದ ಗ್ರಾಮೀಣ ಜಿಲ್ಲಾ ಘಟಕದ ಅಧ್ಯಕ್ಷ ಸುಭಾಷ ಪಾಟೀಲ ಹೇಳಿದರು.
ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪಕ್ಷದ ಶಾಸಕರು, ಮಾಜಿ ಶಾಸಕರು, ಮುಖಂಡರು, ಟಿಕೆಟ್ ಆಕಾಂಕ್ಷಿಗಳು ಇದರಲ್ಲಿ ಪಾಲ್ಗೊಳ್ಳುವರು’ ಎಂದರು.
ಬಿಜೆಪಿ ವಕ್ತಾರ ಎಂ.ಬಿ.ಝಿರಲಿ, ‘ಮಾ.5ರಂದು ಬೆಳಿಗ್ಗೆ 11ಕ್ಕೆ ಚಿಕ್ಕೋಡಿಯಲ್ಲಿ ಬಿಜೆಪಿ ಬೂತ್ ಮೇಲ್ಪಟ್ಟದ ಕಾರ್ಯಕರ್ತರ ಸಭೆ ನಡೆಯಲಿದೆ. ಸಂಜೆ 4.30ಕ್ಕೆ ಬೆಳಗಾವಿಯಲ್ಲಿ ಪ್ರಬುದ್ಧರ ಸಭೆ ಆಯೋಜಿಸಿದ್ದು, ವೈದ್ಯರು, ಉದ್ಯಮಿಗಳು ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು ಭಾಗವಹಿಸುವರು’ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.