ADVERTISEMENT

ವಂಟಮೂರಿ ಮಹಿಳೆ ಮೇಲೆ ಹಲ್ಲೆ ಪ್ರಕರಣ: ಸಿಪಿಐ ವಿಜಯಕುಮಾರ್‌ ಸಿನ್ನೂರ ಅಮಾನತು

​ಪ್ರಜಾವಾಣಿ ವಾರ್ತೆ
Published 15 ಡಿಸೆಂಬರ್ 2023, 20:06 IST
Last Updated 15 ಡಿಸೆಂಬರ್ 2023, 20:06 IST
ಹೈಕೋರ್ಟ್‌
ಹೈಕೋರ್ಟ್‌   

ಬೆಳಗಾವಿ: ತಾಲ್ಲೂಕಿನ ಹೊಸ ವಂಟಮೂರಿ ಗ್ರಾಮದಲ್ಲಿ ಈಚೆಗೆ ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿ, ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಕಾಕತಿ ಸಿಪಿಐ ವಿಜಯಕುಮಾರ್‌ ಸಿನ್ನೂರ ಅವರನ್ನು ಅಮಾನತು ಮಾಡಲಾಗಿದೆ.

ಅಪರಾಧ ಕೃತ್ಯ ತಡೆಯುವಲ್ಲಿ ಕರ್ತವ್ಯಲೋಪ ಮಾಡಿದ ಆರೋಪದ ಮೇಲೆ, ಹೈಕೋರ್ಟ್‌ ನಿರ್ದೇಶನದಂತೆ, ನಗರ ಪೊಲೀಸ್‌ ಆಯುಕ್ತ ಎಸ್‌.ಎನ್‌.ಸಿದ್ರಾಮಪ್ಪ ಈ ಅಮಾನತು ಆದೇಶ ಹೊರಡಿಸಿದ್ದಾರೆ.

ಸಿಪಿಐ ಅಮಾನತು: ಇನ್ನೊಂದು ಪ್ರಕರಣದಲ್ಲಿ ಚನ್ನಮ್ಮನ ಕಿತ್ತೂರು ತಾಲ್ಲೂಕಿನ ತಿಗಡೊಳ್ಳಿ ಗ್ರಾಮದಲ್ಲಿ ಕೊಲೆಗೆ ಪ್ರತಿಕಾರವಾಗಿ ರೌಡಿಶೀಟರ್ ಹತ್ಯೆ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಎಸಗಿದ್ದು ಕಂಡುಬಂದಿದ್ದರಿಂದ ಸಿಪಿಐ ಮಹಾಂತೇಶ ಹೊಸಪೇಟ ಅವರನ್ನು ಎಸ್ಪಿ ಡಾ.ಭೀಮಾಶಂಕರ ಗುಳೇದ ಅವರು ಅಮಾನತು ಮಾಡಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.