ಮೂಡಲಗಿ: ಅರಭಾವಿಯ ನಾಡಕಚೇರಿಗೆ ಬರುವ ಸಾರ್ವಜನಿಕರಿಗೆ ಏಜೆಂಟರು ಕಿರುಕಿಳು ನೀಡುತ್ತಿದ್ದಾರೆ ಮತ್ತು ಖಾಸಗಿ ಸಿಬ್ಬಂದಿಯವರ ಹಾವಳಿ ಅಧಿಕವಾಗಿದೆ. ಹಣ ನೀಡಿದರೆ ಮಾತ್ರ ಕೆಲಸ ಮಾಡಿಕೊಡುವರು ಇದು ನಿಲ್ಲಬೇಕು ಎಂದು ಕರುನಾಡು ರಕ್ಷಣಾ ವೇದಿಕೆಯವರು ಮಂಗಳವಾರ ಮೂಡಲಗಿ ತಹಶೀಲ್ದಾರ್ ಅವರಿಗೆ ಮನವಿ ನೀಡಿರುವರು.
ನಾಡಕಚೇರಿಯಲ್ಲಿ ಕೆಲಸ ಮಾಡುತ್ತಿರುವ ಖಾಸಗಿ ಸಿಬ್ಬಂದಿಯವರು ಸಾರ್ವಜನಿಕರಿಗೆ ಅಸಭ್ಯವಾಗಿ ವರ್ತಿಸುತ್ತಿರುವರು. ಏಜೆಂಟರು ಕಚೇರಿಗೆ ಪ್ರವೇಶವನ್ನು ನಿಷೇಧಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.
ವೇದಿಕೆಯ ರಾಜ್ಯಾಧ್ಯಕ್ಷ ಮಲಿಕಾರ್ಜುನ ಮರಕುಂಬಿ, ಜಿಲ್ಲಾಧ್ಯಕ್ಷ ಸಿದ್ದು ಕಂಕಣವಾಡಿ ಅವರ ನೇತೃತ್ವದಲ್ಲಿ ಮನವಿ ನೀಡಿದರು.
ವೇದಿಕೆಯ ಸದಸ್ಯರಾದ ಗೋಪಾಲ ಗೋಪಾಳಿ, ಲಕ್ಷ್ಮಣ ಪೂಜೇರಿ, ಬಸು ಮಲ್ಹಾರಿ, ವಿಠಲ ಪೂಜೇರಿ, ಆನಂದ ಕೋಳಿ, ಮುತ್ತಪ್ಪ ಪೂಜೇರಿ, ಹಣಮಂತ ಕಳ್ಯಾಗೋಳ, ಹಾಲಪ್ಪ ಪೂಜೇರಿ, ಲಕ್ಕಪ್ಪ ಪೂಜೇರಿ, ಬಸವರಾಜ ಪೂಜೇರಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.