ADVERTISEMENT

ಎಂಜಿನಿಯರಿಂಗ್ ಪಠ್ಯಪುಸ್ತಕ ಕನ್ನಡದಲ್ಲಿ ಸಿಗಲಿ: ವಕೀಲ ರಾಜು ಬಾಗೇವಾಡಿ

​ಪ್ರಜಾವಾಣಿ ವಾರ್ತೆ
Published 1 ನವೆಂಬರ್ 2021, 13:40 IST
Last Updated 1 ನವೆಂಬರ್ 2021, 13:40 IST
ಬೆಳಗಾವಿಯ ಕಸಾಪದಿಂದ ನೆಹರೂ ನಗರದ ಕನ್ನಡ ಭವನದ ಆವರಣದಲ್ಲಿ ಕರ್ನಾಟಕ ರಾಜ್ಯೋತ್ಸವವನ್ನು ಸೋಮವಾರ ಆಚರಿಸಲಾಯಿತು
ಬೆಳಗಾವಿಯ ಕಸಾಪದಿಂದ ನೆಹರೂ ನಗರದ ಕನ್ನಡ ಭವನದ ಆವರಣದಲ್ಲಿ ಕರ್ನಾಟಕ ರಾಜ್ಯೋತ್ಸವವನ್ನು ಸೋಮವಾರ ಆಚರಿಸಲಾಯಿತು   

ಬೆಳಗಾವಿ: ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದಿಂದ ಇಲ್ಲಿನ ನೆಹರೂ ನಗರದ ಕನ್ನಡ ಭವನದಲ್ಲಿ 66ನೇ ಕರ್ನಾಟಕ ರಾಜ್ಯೋತ್ಸವವನ್ನು ಸರಳವಾಗಿ ಸೋಮವಾರ ಆಚರಿಸಲಾಯಿತು.

ವಕೀಲ ರಾಜು ಬಾಗೇವಾಡಿ ಕನ್ನಡ ಧ್ವಜಾರೋಹಣ ನೆರವೇರಿಸಿ ಸಂದೇಶ ನೀಡಿದರು.

ನಿವೃತ್ತ ಶಿಕ್ಷಕ ಸಿ.ಎಂ.ಬೂದಿಹಾಳ, ‘ಕನ್ನಡವನ್ನು ಬಳಸುವುದರ ಮೂಲಕ, ಉಳಿಸಿ ಬೆಳೆಸಬೇಕು’ ಎಂದರು.

ADVERTISEMENT

ಅಧ್ಯಕ್ಷತೆ ವಹಿಸಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷೆ ಮಂಗಲಾ ಮಟಗುಡ್ಡ, ‘ಎಂಜಿನಿಯರಿಂಗ್ ಹಾಗೂ ವೈದ್ಯಕೀಯ ಶಿಕ್ಷಣದ ಪಠ್ಯಪುಸ್ತಕಗಳನ್ನು ಕನ್ನಡದಲ್ಲಿ ಬರೆದು, ಕನ್ನಡ ನಾಡಿನ ಮಕ್ಕಳಿಗೆ ಕನ್ನಡದಲ್ಲಿಯೇ ಕಲಿಯಲು ಅವಕಾಶ ಮಾಡಿಕೊಡಬೇಕು’ ಎಂದು ಹೇಳಿದರು.

ಮೋಹನಗೌಡ ಬ. ಪಾಟೀಲ, ಸ.ರಾ. ಸುಳಕೂಡೆ, ಶೈಲಜಾ ಬಿಂಗೆ, ಜಯಶೀಲ ಬ್ಯಾಕೋಡ, ಶಾಂತಾ ಮಸೂತಿ, ಚೇತನ ಏಣಗಿಮಠ ಇದ್ದರು.

ಎಂ.ವೈ. ಮೆಣಸಿನಕಾಯಿ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.