ಹುಕ್ಕೇರಿ: ಸಮರ್ಪಕವಾಗಿ ಜವಾಬ್ದಾರಿ ನಿರ್ವಹಿಸದೇ ಸರ್ಕಾರಿ ಸೇವಾ ನಿಯಮಾವಳಿ ಉಲ್ಲಂಘಿಸಿದ್ದಾರೆ ಎಂಬ ಕಾರಣದಿಂದ ತಾಲ್ಲೂಕಿನ ಅವರಗೋಳ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಎನ್.ಆರ್. ನಾರಾಯಣಕರ ಅವರನ್ನು ಅಮಾನತುಗೊಳಿಸಿ ಶಿಕ್ಷಣ ಇಲಾಖೆ ಧಾರವಾಡ ವಲಯ ಹೆಚ್ಚುವರಿ ಆಯುಕ್ತೆ ಜಯಶ್ರೀ ಶಿಂತ್ರಿ ಆದೇಶಿಸಿದ್ದಾರೆ.
ಶಾಲಾ ಮೂಲ ಸೌಲಭ್ಯಗಳ ನಿರ್ವಹಣೆ ಸರಿಯಾಗಿ ಮಾಡುತ್ತಿಲ್ಲ. ವಿದ್ಯಾರ್ಥಿಗಳಿಗೆ ಗ್ರಾಮೀಣ ಅಭ್ಯರ್ಥಿ ಮತ್ತು ಕನ್ನಡ ಮಾಧ್ಯಮ ವ್ಯಾಸಂಗ ಪ್ರಮಾಣ ಪತ್ರ ನೀಡಲು ವಿಳಂಬ ಮಾಡಲಾಗುತ್ತಿದೆ. ಶಾಲೆಯ ಬೋಧಕ ಸಿಬ್ಬಂದಿಗೆ ಕಿರುಕುಳ ಸೇರಿದಂತೆ ಹಲವು ಗಂಭೀರ ಆರೋಪಗಳು ಇರುವ ಕಾರಣ ನಾರಾಯಣಕರ ಅವರನ್ನು ಇಲಾಖಾ ವಿಚಾರಣೆ ಕಾಯ್ದರಿಸಿ ಅಮಾನತುಗೊಳಿಸಲು ಚಿಕ್ಕೋಡಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಚಿಕ್ಕೋಡಿ ಶೈಕ್ಷಣಿಕ ಜಿಲ್ಲಾ ಉಪನಿರ್ದೇಶಕರ ಉಲ್ಲೇಖಿತ ಪತ್ರದ ಪ್ರಕಾರ ಅಮಾನತುಗೊಳಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.