ಕಾಗವಾಡ: ತಾಲ್ಲೂಕಿನ ಶಿರುಗುಪ್ಪಿ ಗ್ರಾಮದ ಶಿವಶಕ್ತಿ ವೀಲ್ರ್ಸ್ ಟೈರ್ ಅಂಗಡಿಗೆ ಶಾರ್ಟ್ ಸರ್ಕಿಟ್ನಿಂದಾಗಿ ಬೆಂಕಿ ತಗಲಿದ್ದು, ಎಲ್ಲ ಸಾಮಾನುಗಳು ಅಗ್ನಿಗಾಹುತಿಯಾಗಿವೆ. ಅಂದಾಜು ₹45 ಲಕ್ಷ ಮತ್ತು ಅದರ ಪಕ್ಕದಲ್ಲಿರುವ ಜೀವನ ಆಗ್ರೋಟೆಕ್ ಗೊಬ್ಬರ ಹಾಗೂ ಬೆಳೆಗಳಿಗೆ ಸಿಂಪಡಿಸುವ ಔಷಧ ಅಂಗಡಿಗೆ ಬೆಂಕಿಯ ಝಳ ತಾಗಿ ಅಲ್ಲಿದ್ದ ರಸಗೊಬ್ಬರ ಮತ್ತು ಬೆಳೆಗಳಿಗೆ ಸಿಂಪಡಿಸುವ ಔಷಧ ಸೇರಿ ಅಂದಾಜು ₹40 ಲಕ್ಷ ಸೇರಿ ಸುಮಾರು ₹85 ಲಕ್ಷ ಮೊತ್ತದಷ್ಟು ಹಾನಿ ಸಂಭವಿಸಿದೆ.
ಶುಕ್ರವಾರ ಬೆಳಿಗ್ಗೆ ಗ್ರಾಮದಲ್ಲಿರುವ ಅನೀಲ ಖಂಡು ಮಾಳಿ ಅವರ ಒಡೆತನದ ಶಿವಶಕ್ತಿ ವೀಲ್ರ್ಸ್ ಟೈರ್ ಅಂಗಡಿಗೆ ಶಾರ್ಟ್ ಸರ್ಕಿಟ್ನಿಂದಾಗಿ ಬೆಂಕಿ ತಗಲಿದೆ ಅದರಲ್ಲಿ ಇರುವ ಎರಡು ಮಾರುತಿ ಕಾರುಗಳು, ಯಂತ್ರೋಪಕರಣಗಳು ಸೇರಿದಂತೆ ಸುಮಾರು ₹45 ಲಕ್ಷದಷ್ಟು ಹಾನಿಯಾಗಿದೆ.
ಅಗ್ನಿ ನಂದಿಸಲು ಸ್ಥಳೀಯರು ಮತ್ತು ರಾಯಬಾಗ, ಉಗಾರ, ಚಿಕ್ಕೋಡಿ, ನಿಪ್ಪಾಣಿಯಿಂದ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ, ಬೆಂಕಿ ನಂದಿಸಿದರು. ಕಾಗವಾಡ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳ ಪರಿಶೀಲನೆ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.