ADVERTISEMENT

ಉಕ್ಕಿ ಹರಿಯುತ್ತಿದೆ ವೇದಗಂಗಾ ನದಿ: ಕಾಳಜಿ ಕೇಂದ್ರಕ್ಕೆ ಸಂತ್ರಸ್ತರ ಸ್ಥಳಾಂತರ

​ಪ್ರಜಾವಾಣಿ ವಾರ್ತೆ
Published 26 ಜುಲೈ 2024, 14:28 IST
Last Updated 26 ಜುಲೈ 2024, 14:28 IST
ನಿಪ್ಪಾಣಿ ತಾಲ್ಲೂಕಿನ ಹುನ್ನರಗಿ ಗ್ರಾಮದಲ್ಲಿ ಸ್ಥಾಪಿಸಿದ ಕಾಳಜಿ ಕೇಂದ್ರದಲ್ಲಿ ಪ್ರವಾಹ ಸಂತ್ರಸ್ತರನ್ನು ಸ್ಥಳಾಂತರಿಸಲಾಯಿತು
ನಿಪ್ಪಾಣಿ ತಾಲ್ಲೂಕಿನ ಹುನ್ನರಗಿ ಗ್ರಾಮದಲ್ಲಿ ಸ್ಥಾಪಿಸಿದ ಕಾಳಜಿ ಕೇಂದ್ರದಲ್ಲಿ ಪ್ರವಾಹ ಸಂತ್ರಸ್ತರನ್ನು ಸ್ಥಳಾಂತರಿಸಲಾಯಿತು   

ನಿಪ್ಪಾಣಿ: ವೇದಗಂಗಾ ನದಿ ಉಕ್ಕಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ತಾಲ್ಲೂಕಿನ ಹುನ್ನರಗಿ ಗ್ರಾಮದಲ್ಲಿ ಶುಕ್ರವಾರ ಮಧ್ಯಾಹ್ನವೇ ಪ್ರವಾಹದ ಪರಿಸ್ಥಿತಿ ಎದುರಾಗಿದ್ದು, ಗ್ರಾಮಸ್ಥರು ಸುರಕ್ಷಿತ ಸ್ಥಳಕ್ಕೆ ತೆರಳುತ್ತಿದ್ದಾರೆ. ಸಂಜೆಯವರೆಗೆ ಸುಮಾರು 40ಕ್ಕೂ ಅಧಿಕ ಕುಂಟುಂಬಗಳು ಜಾನುವಾರುಗಳ ಸಮೇತ ಸ್ಥಳಾಂತರಣೆ ಮಾಡಿದ್ದು 50ಕ್ಕೂ ಅಧಿಕ ಕುಟುಂಬಗಳಿಗೆ ಸ್ಥಳಾಂತರಗೊಳ್ಳಲು ಸೂಚಿಸಲಾಗಿದೆ.

ಹುನ್ನರಗಿ ಗ್ರಾಮದ 41 ಕುಟುಂಬಗಳಲ್ಲಿಯ ಒಟ್ಟು 89 ಜನರಿಗೆ ಸ್ಥಳಾಂತರಿಸಲಾಗಿದೆ. ಇವರಲ್ಲಿ 26 ಕುಟುಂಬಗಳು ಗ್ರಾಮದ ಕನ್ನಡ ಗಂಡು ಮಕ್ಕಳ ಶಾಲೆಯಲ್ಲಿ ಸ್ಥಾಪಿಸಿದ ಗಂಜಿ ಕೇಂದ್ರದಲ್ಲಿ ಸ್ಥಳಾಂತರಿಸಲಾಗಿದೆ. ಇನ್ನುಳಿದ 15 ಕುಟುಂಬಗಳು ಸಂಬಂಧಿಕರ ಮನೆಗಳಿಗೆ ತೆರಳಿದ್ದಾರೆ.

ಹುನ್ನರಗಿ ಗ್ರಾಮದ ಪಕ್ಕದ ಸಿದ್ನಾಳ ಗ್ರಾಮದಲ್ಲಿಯೂ ಕೂಡ 4 ಕುಟುಂಬಗಳಿಗೆ ಸ್ಥಳಾಂತರಿಸಲಾಗಿದೆ. ನಾಲ್ಕೂ ಕುಟುಂಬಗಳು ಸಂಬಂಧಿಕರ ಮನೆಗಳಿಗೆ ತೆರಳಿದ್ದಾರೆ. ಸಿದ್ನಾಳ ಗ್ರಾಮದ ಸರ್ಕಾರಿ ಮರಾಠಿ ಗಂಡು ಮಕ್ಕಳ ಶಾಲೆಯಲ್ಲಿ ಗಂಜಿ ಕೇಂದ್ರ ಆರಂಭಿಸಲಾಗಿದೆ ಎಂದು ತಹಶೀಲ್ದಾರ್‌ ಮುಜಫ್ಫರ್ ಬಳಿಗಾರ ಹೇಳಿದ್ದಾರೆ.

ADVERTISEMENT

ತುಂಬಿ ಹರೆಯುತ್ತಿರುವ ಜಲಾಶಯ: ಸ್ಥಳೀಯ ನಗರಕ್ಕೆ ಕುಡಿಯುವ ನೀರು ಪೂರೈಸುವ 46 ಅಡಿ ಸಾಮರ್ಥ್ಯದ ಬೃಹತ್ ಜವಾಹರ ಜಲಾಶಯವು ಶುಕ್ರವಾರ ತುಂಬಿ ಹರಿಯುತ್ತಿದೆ.

ಶುಕ್ರವಾರ ಬೆಳಿಗ್ಗೆಯ ಮಾಪನದಂತೆ ಸ್ಥಳೀಯ ಲೋಕೋಪಯೋಗಿ ಇಲಾಖೆಯಲ್ಲಿ 5.8 ಸೆಂ.ಮೀ., ಕೃಷಿ ಸಂಶೋಧನಾ ಕೇಂದ್ರದಲ್ಲಿ 6.1 ಸೆಂ.ಮೀ., ತಾಲ್ಲೂಕಿನ ಸೌಂದಲಗಾದಲ್ಲಿ 5.2 ಸೆಂ.ಮೀ. ಮತ್ತು ಗಳತಗಾ ಗ್ರಾಮದಲ್ಲಿ 7.4 ಸೆಂ.ಮೀ. ಮಳೆ ಸುರಿದಿದೆ.

ನಿಪ್ಪಾಣಿ ತಾಲ್ಲೂಕಿನ ಹುನ್ನರಗಿ ಗ್ರಾಮದ ಕೆಲ ಪ್ರವಾಹ ಸಂತ್ರಸ್ತರು ಜಾನುವಾರು ಸಹಿತ ಸಂಬಂಧಿಕರ ಮನೆಗಳಿಗೆ ತೆರಳಿದರು
ನಿಪ್ಪಾಣಿ ನಗರದ ಜವಾಹರ್‌ ಜಲಾಶಯ ತುಂಬಿ ಹರಿಯುತ್ತಿದೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.