ಬೆಳಗಾವಿ: ‘ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ರಾಜ್ಯದ ಪ್ರತಿ ಮನೆ ತಲುಪಿವೆ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಹೇಳಿದರು.
ತಾಲ್ಲೂಕಿನ ಕುದ್ರೇಮನೆಯಲ್ಲಿ ಗ್ರಾಮಸ್ಥರು ಶನಿವಾರ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.
‘ಗ್ಯಾರಂಟಿ ಯೋಜನೆಗಳಿಂದ ಜನರ ಆರ್ಥಿಕತೆ ಸುಧಾರಿಸಿದೆ. ಇದು ನಮ್ಮ ಸರ್ಕಾರ ಎಂಬ ಭಾವನೆ ಜನರಲ್ಲಿ ಮೂಡಿದೆ’ ಎಂದು ತಿಳಿಸಿದರು.
ಯುವರಾಜ ಕದಂ, ಅರುಣ ದೇವನ್, ದೀಪಕ್ ಪಾಟೀಲ, ವಿಮಲಾತಾಯಿ ಸಾಖರೆ, ಪಿಂಟು ಕಾಗಣಕರ್, ವಿನಾಯಕ ಪಾಟೀಲ, ಶಂಕರ ಪಾಟೀಲ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.