ನಿಪ್ಪಾಣಿ: ತಾಲ್ಲೂಕಿನ ಶೇಂಡೂರ ಗ್ರಾಮದ ಸುಮಾರು 25 ಎನ್ಸಿಪಿ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಗೊಂಡರು. ತಾಲ್ಲೂಕಿನ ಭಿವಶಿ ಗ್ರಾಮದಲ್ಲಿ ಶಾಸಕಿ ಶಶಿಕಲಾ ಜೊಲ್ಲೆ ಎಲ್ಲ ಕಾರ್ಯಕರ್ತರನ್ನು ಪಕ್ಷದ ಶಾಲು ಹೊದಿಸಿ ಬರಮಾಡಿಕೊಂಡರು.
ಗ್ರಾಮದ ರಾಜೇಂದ್ರ ಲಾಡ, ಪ್ರವೀಣ ಲಾಡ ನೇತೃತ್ವದಲ್ಲಿ ವಿನಾಯಕ ಗಿರಿ, ತುಕಾರಾಮ ವಡೆಖರ, ಪಾಂಡುರಂಗ ಲಾಡ, ಗಜಾನನ ಕಾಂಬಳೆ, ರಾಜೇಂದ್ರ ದಳವಿ, ಅಣ್ಣಪ್ಪಾ ತೋಡಕರ, ಸಂದೀಪ ದೇಸಾಯಿ, ಮೊದಲಾದವರು ಸೇರಿದಂತೆ ಸುಮಾರು 25 ಕಾರ್ಯಕರ್ತರು ಎನ್ಸಿಪಿ ಪಕ್ಷ ತೊರೆದು ಬಿಜೆಪಿಗೆ ಸೇರ್ಪಡೆಗೊಂಡರು.
ಶಾಸಕಿ ಶಶಿಕಲಾ ಜೊಲ್ಲೆ ಮಾತನಾಡಿ, ‘ಕಳೆದ 10 ವರ್ಷಗಳಲ್ಲಿ ಬಿಜೆಪಿ ಭಾರತದ ಚಿತ್ರಣವೇ ಬದಲಾಯಿಸಿದೆ. ಸಂಸದ ಅಣ್ಣಾಸಾಹೇಬ ಜೊಲ್ಲೆಯವರು ತಮ್ಮ ಆಡಳಿತ ಅವಧಿಯಲ್ಲಿ ₹8,810 ಕೋಟಿಗೂ ಅಧಿಕ ಅಭಿವೃಧ್ಧಿ ಕಾಮಗಾರಿಗಳನ್ನು ತಮ್ಮ ಕ್ಷೇತ್ರದಲ್ಲಿ ಕೈಗೊಂಡಿದ್ದಾರೆ. ಇದು ಅವರ ಗೆಲುವಿಗೆ ಶ್ರೀರಕ್ಷೆಯಾಗಲಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.