ADVERTISEMENT

ಮೂಡಲಗಿ | ಶಾಂತಿಯುತ ಬಕ್ರೀದ್‌ ಆಚರಣೆಗೆ ಮನವಿ

​ಪ್ರಜಾವಾಣಿ ವಾರ್ತೆ
Published 12 ಜೂನ್ 2024, 15:42 IST
Last Updated 12 ಜೂನ್ 2024, 15:42 IST
ಮೂಡಲಗಿಯ ಪೊಲೀಸ್ ಠಾಣೆಯಲ್ಲಿ ಬಕ್ರೀದ್‌ ಹಬ್ಬದ ಪ್ರಯುಕ್ತ ಜರುಗಿದ ಶಾಂತಿ ಸಭೆಯಲ್ಲಿ ಸಿಪಿಐ ಅಬ್ದುಲ್‌ವಾಜೀದ್‌ ಪಟೇಲ್‌ ಮಾತನಾಡಿದರು. 
ಮೂಡಲಗಿಯ ಪೊಲೀಸ್ ಠಾಣೆಯಲ್ಲಿ ಬಕ್ರೀದ್‌ ಹಬ್ಬದ ಪ್ರಯುಕ್ತ ಜರುಗಿದ ಶಾಂತಿ ಸಭೆಯಲ್ಲಿ ಸಿಪಿಐ ಅಬ್ದುಲ್‌ವಾಜೀದ್‌ ಪಟೇಲ್‌ ಮಾತನಾಡಿದರು.    

ಮೂಡಲಗಿ: ‘ಬಕ್ರೀದ್‌ ಹಬ್ಬವನ್ನು ಶಾಂತಿ ಮತ್ತು ಸೌಹಾರ್ದದಿಂದ ಆಚರಿಸಬೇಕು. ಯಾವುದೇ ರೀತಿಯ ಅಹಿತಕರ ಘಟನೆಗಳಿಗೆ ಆಸ್ಪದ ನೀಡಬಾರದು’ ಎಂದು ಮೂಡಲಗಿಯ ಸಿಪಿಐ ಅಬ್ದುಲ್‌ ವಾಜೀದ್ ಪಟೇಲ್ ಹೇಳಿದರು.

ಮೂಡಲಗಿಯ ಪೊಲೀಸ್‌ ಠಾಣೆಯಲ್ಲಿ ಬಕ್ರೀದ್‌ ನಿಮಿತ್ತ ಏರ್ಪಡಿಸಿದ್ದ ಶಾಂತಿ ಸಭೆ ಉದ್ಧೇಶಿಸಿ ಮಾತನಾಡಿದ ಅವರು, ಮೂಡಲಗಿಯು ಸಾಮರಸ್ಯಕ್ಕೆ ಹೆಸರಾಗಿದೆ. ಅಂಥ ಹೆಸರಿಗೆ ಚ್ಯುತಿಯಾಗದಂತೆ ಇರಬೇಕು. ಕಾನೂನು ಪಾಲನೆ ಮಾಡದಿರುವ ವ್ಯಕ್ತಿಗಳ ಮೇಲೆ ಕಾನೂನು ಕ್ರಮವನ್ನು ತೆಗೆದುಕೊಳ್ಳಲಾಗುಗುವುದು ಎಂದರು.

ಪಿಎಸ್‌ಐ ಚಂದ್ರಶೇಖರ ಹೆರಕಲ್‌ ಮಾತನಾಡಿದರು. ಶಾಂತಿ ಸಭೆಯಲ್ಲಿ ಮುಸ್ಲಿಂ ಸಮಾಜದ ಮುಖಂಡರಾದ ಲಾಲಸಾಬ್ ಸಿದ್ಧಾಪುರ, ಮಲ್ಲಿಕ ಕಳ್ಳಿಮನಿ ಸಮಾಜದ ಪರವಾಗಿ ಮಾತನಾಡಿದರು. ಸಭೆಯಲ್ಲಿ ಮುಸ್ಲಿಂ ಸಮಾಜದ ಮುಖಂಡರು, ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಭಾಗವಹಿಸಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.