ADVERTISEMENT

ಬೆಳಗಾವಿ: ನಾರಾಯಣಗೌಡ ಬಂಧನ ಖಂಡಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 31 ಡಿಸೆಂಬರ್ 2023, 6:59 IST
Last Updated 31 ಡಿಸೆಂಬರ್ 2023, 6:59 IST
<div class="paragraphs"><p>ರಾಣಿ ಚನ್ನಮ್ಮನ ವೃತ್ತದಲ್ಲಿ ವೇದಿಕೆ ಜಿಲ್ಲಾ ಘಟಕದ ಪದಾಧಿಕಾರಿಗಳ  ಪ್ರತಿಭಟನೆ</p></div>

ರಾಣಿ ಚನ್ನಮ್ಮನ ವೃತ್ತದಲ್ಲಿ ವೇದಿಕೆ ಜಿಲ್ಲಾ ಘಟಕದ ಪದಾಧಿಕಾರಿಗಳ ಪ್ರತಿಭಟನೆ

   

ಬೆಳಗಾವಿ: ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ. ನಾರಾಯಣಗೌಡ ಬಂಧಿಸಿರುವುದನ್ನು ಖಂಡಿಸಿ ಇಲ್ಲಿನ ರಾಣಿ ಚನ್ನಮ್ಮನ ವೃತ್ತದಲ್ಲಿ ವೇದಿಕೆ ಜಿಲ್ಲಾ ಘಟಕದ ಪದಾಧಿಕಾರಿಗಳು ಭಾನುವಾರ ಪ್ರತಿಭಟನೆ ಆರಂಭಿಸಿದ್ದಾರೆ.

‌ಈ ಮಾರ್ಗದಲ್ಲಿ ಸಾಗುವ ಎಲ್ಲ ಬಸ್‌ಗಳನ್ನು ತಡೆದು ಆಕ್ರೋಶ‌ ವ್ಯಕ್ತಪಡಿಸುತ್ತಿರುವ ಪ್ರತಿಭಟನಕಾರರು, ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಿದ್ದಾರೆ. ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ.

ADVERTISEMENT

ಪ್ರತಿಭಟನೆ ತಡೆಯಲು ಯತ್ನಿಸಿದ ಪೊಲೀಸರು ಮತ್ತು ಕಾರ್ಯಕರ್ತರ ಮಧ್ಯೆ ತಳ್ಳಾಟ, ನೂಕಾಟ ನಡೆಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.