ADVERTISEMENT

ಅಕಾಲಿಕ ಮಳೆ | ಅಪಾರ ಬೆಳೆ ನಾಶ: ಪರಿಶೀಲನೆ

ಕಳೆದೊಂದು ವಾರದಿಂದ ಸುರಿದ ಅಕಾಲಿಕ ಮಳೆ, ರೈತರಿಗೆ ಒದಗಿದ ಸಂಕಷ್ಟ

​ಪ್ರಜಾವಾಣಿ ವಾರ್ತೆ
Published 26 ಅಕ್ಟೋಬರ್ 2024, 16:17 IST
Last Updated 26 ಅಕ್ಟೋಬರ್ 2024, 16:17 IST
ಯರಗಟ್ಟಿ ತಾಲ್ಲೂಕಿನ ಮುಗಳಿಹಾಳ ಗ್ರಾಮದಲ್ಲಿ ಶನಿವಾರ ಕೃಷಿ ಅಧಿಕಾರಿಗಳು ಬೆಳೆ ಹಾನಿ ಸಮೀಕ್ಷೆ ನಡೆಸಿದರು
ಯರಗಟ್ಟಿ ತಾಲ್ಲೂಕಿನ ಮುಗಳಿಹಾಳ ಗ್ರಾಮದಲ್ಲಿ ಶನಿವಾರ ಕೃಷಿ ಅಧಿಕಾರಿಗಳು ಬೆಳೆ ಹಾನಿ ಸಮೀಕ್ಷೆ ನಡೆಸಿದರು   

ಸತ್ತಿಗೇರಿ/ ಮುಗಳಿಹಾಳ: ಕಳೆದ ಒಂದು ವಾರದಿಂದ ಸುರಿದ ಮಳೆಯಿಂದ ಯರಗಟ್ಟಿ ತಾಲ್ಲೂಕಿನ ಕೊಡ್ಲಿವಾಡ, ಅಕ್ಕಿಸಾಗರ ಗುಡಮಕೇರಿ, ಇಟ್ನಾಳ ಗ್ರಾಮಗಳಲ್ಲಿ ಬೆಳೆದ ಬೆಳೆಗಳು ಹಾನಿಯಾಗಿವೆ. ಹಾನಿ ಪರಿಶೀಲನೆಗೆ ಈಗಾಗಲೇ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳ ತಂಡ ಸಮೀಕ್ಷೆ ಶುರು ಮಾಡಿದೆ.

ಯರಗಟ್ಟಿ ತಾಲ್ಲೂಕಿನ ಹತ್ತಿ, ಶೇಂಗಾ, ಈರುಳ್ಳಿ, ಗೋವಿನಜೋಳ ಮುಂತಾದ ಹಾನಿಗೊಳಗಾದ ಬೆಳೆಗಳನ್ನು ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕ ಶಿವಪ್ರಕಾಶ್ ಪಾಟೀಲ ಮತ್ತು ಗ್ರಾಮ ಲೆಕ್ಕಾಧಿಕಾರಿಗಳು, ಎ.ಬಿ. ಹುಣಶ್ಯಾಳ, ಕೃಷಿ ಇಲಾಖೆ ಅಧಿಕಾರಿ ಎಸ್.ಎಲ್. ದೇಸಾಯಿ ಹೊಲಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ರೈತ ಸಂಘದ ಮುಖಂಡ ಸಿಂದೂರ್ ತೆಗ್ಗಿ ಮಾತನಾಡಿ, ‘ರೈತರಿಗೆ ಈ ಬಾರಿ ಸಾಕಷ್ಟು ಬೆಳೆ ಹಾನಿಯಾಗಿದೆ. ಸಾಲ ಮಾಡಿ ರೈತ ಗೋವಿನ ಜೋಳ, ಹತ್ತಿ ಮುಂತಾದ ಹಾನಿಗೊಳಗಾದ ಬೆಳೆಗಳಿಗೆ ಪರಿಹಾರ ನೀಡಬೇಕು’ ಎಂದು ಹೇಳಿದರು.

ADVERTISEMENT

‘ಮಳೆಯಿಂದ ನೀರಾವರಿ, ಒಣಭೂಮಿಯ ಬೆಳೆಗಳೂ ಹಾಳಾಗಿವೆ. ಪರಿಹಾರ ಮತ್ತು ಬೆಳೆವಿಮೆ ನೀಡಬೇಕು. ಬೆಳೆ ಪರಿಹಾರ ನೀಡುವಲ್ಲಿ ಯಾವುದೇ ತಾರತಮ್ಯ ಮಾಡದೇ ಆದಷ್ಟು ಬೇಗನೆ ಪರಿಹಾರ ಒದಗಿಸಬೇಕು’ ಎಂದು ಅಗ್ರಹಿಸಿದರು.

ಕೃಷಿ ಸಂಜೀವಿನಿ ಸಿಬ್ಬಂದಿ, ಶ್ರವಣ್ ಶಿವಪೂಜಿ, ಮಂಜುನಾಥ್ ಮುಂದೇಶಿ ಮತ್ತಿತರರು ಉಪಸ್ಥಿತರಿದ್ದರು.

ಮುಗಳಿಹಾಳ ವರದಿ: ‘ಕಳೆದ ಒಂದು ವಾರದಿಂದ ಸುರಿದ ಮಳೆಯಿಂದ ಗ್ರಾಮದ ವ್ಯಾಪ್ತಿಯಲ್ಲಿ ಬೆಳೆದ ಬೆಳೆ ಹಾನಿಯಾದ ಹತ್ತಿ, ಶೇಂಗಾ, ಈರುಳ್ಳಿ, ಗೋವಿನಜೋಳ ಮುಂತಾದ ಬೆಳೆಗಳು ಹಾಳಾಗಿದ್ದು, ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕ ಶಿವಪ್ರಕಾಶ್ ಪಾಟೀಲ ಮತ್ತು ಗ್ರಾಮ ಲೆಕ್ಕಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.‌

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.