ADVERTISEMENT

ರೇಣುಕಸ್ವಾಮಿ ಕೊಲೆ ಪ್ರಕರಣ: ಆರೋಪಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 16 ಜೂನ್ 2024, 13:15 IST
Last Updated 16 ಜೂನ್ 2024, 13:15 IST
ಬೆಳಗಾವಿಯ ರಾಣಿ ಚನ್ನಮ್ಮನ ವೃತ್ತದಲ್ಲಿ ಜಿಲ್ಲೆಯ ಜಂಗಮ ಸಂಘಟನೆ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ(ಶಿವರಾಮೇಗೌಡ ಬಣ) ಕಾರ್ಯಕರ್ತರುಭಾನುವಾರ ಪ್ರತಿಭಟಿಸಿದರು
ಬೆಳಗಾವಿಯ ರಾಣಿ ಚನ್ನಮ್ಮನ ವೃತ್ತದಲ್ಲಿ ಜಿಲ್ಲೆಯ ಜಂಗಮ ಸಂಘಟನೆ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ(ಶಿವರಾಮೇಗೌಡ ಬಣ) ಕಾರ್ಯಕರ್ತರುಭಾನುವಾರ ಪ್ರತಿಭಟಿಸಿದರು   

ಬೆಳಗಾವಿ: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಭಾಗಿಯಾದ ನಟ ದರ್ಶನ್‌, ಪವಿತ್ರಾ ಗೌಡ ಹಾಗೂ ಇತರೆ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ, ಜಿಲ್ಲೆಯ ಜಂಗಮ ಸಂಘಟನೆ ಮತ್ತು ಕರ್ನಾಟಕ ರಕ್ಷಣಾ ವೇದಿಕೆ(ಶಿವರಾಮೇಗೌಡ ಬಣ) ಕಾರ್ಯಕರ್ತರು ಇಲ್ಲಿನ ರಾಣಿ ಚನ್ನಮ್ಮನ ವೃತ್ತದಲ್ಲಿ ಭಾನುವಾರ ಪ್ರತಿಭಟನೆ ನಡೆಸಿ‌ದರು. ದರ್ಶನ್‌ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು ಆಕ್ರೋಶ ವ್ಯಕ್ತಪಡಿಸಿದರು.

‘ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಕೊಲೆ ಪ್ರಕರಣ ಹೆಚ್ಚಿವೆ. ರೇಣುಕಸ್ವಾಮಿ ಕೊಲೆ ಪ್ರಕರಣದ ಆರೋಪಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು’ ಎಂದು ಒತ್ತಾಯಿಸಿದರು.

ಮುಖಂಡರಾದ ಮಹಾಂತೇಶ ರಣಗಟ್ಟಿಮಠ, ವಾಜೀದ್ ಹಿರೇಕೋಡಿ, ಸಂಗೀತಾ ಕಾಂಬಳೆ, ಮಹೇಶ ಹಿರೇಮಠ, ಈರಣ್ಣಾ  ಹಿರೇಮಠ, ಜಗದೀಶ ಮಠದ ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.