ಬೆಳಗಾವಿ: ಇಲ್ಲಿನ ಅಶೋಕ ನಗರದ ಇಎಸ್ಐ ಆಸ್ಪತ್ರೆಗೆ ಕೇಂದ್ರ ಕಾರ್ಮಿಕ ಹಾಗೂ ಉದ್ಯೋಗ ಇಲಾಖೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಭಾನುವಾರ ಭೇಟಿ ನೀಡಿ, ವ್ಯವಸ್ಥೆ ಪರಿಶೀಲಿಸಿದರು.
ತುರ್ತುಸೇವೆ, ಎಲುವು-ಕೀಳು, ಔಷಧ ಸೇರಿ ವಿವಿಧ ವಿಭಾಗಗಳಿಗೆ ತೆರಳಿದ ಅವರು, ಆಸ್ಪತ್ರೆ ಕಾರ್ಯವೈಖರಿ ಬಗ್ಗೆ ವೈದ್ಯಾಧಿಕಾರಿಯಿಂದ ಮಾಹಿತಿ ಪಡೆದುಕೊಂಡರು.
'ನಿರ್ಮಾಣಗೊಂಡ ಇಪ್ಪತ್ತೈದೇ ವರ್ಷಕ್ಕೆ ಕಟ್ಟಡ ಇಷ್ಟೊಂದು ಅಧೋಗತಿಗೆ ತಲುಪಿದ್ದು ಏಕೆ? ಇದನ್ನು ನಿರ್ಮಿಸಿದ್ದು ಮತ್ತು ಈಗ ನಿರ್ವಹಿಸುತ್ತಿರುವವರು ಯಾರು?' ಎಂದು ಪ್ರಶ್ನಿಸಿದರು.
ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕ ಅಭಯ ಪಾಟೀಲ, ಮಾಜಿ ಶಾಸಕ ಅನಿಲ ಬೆನಕೆ ಇತರರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.