ADVERTISEMENT

ಐಗಳಿ: ‘ಕೆರೆ ತುಂಬುವ ಕಾಮಗಾರಿ ಶೀಘ್ರ ಪೂರ್ಣ’

​ಪ್ರಜಾವಾಣಿ ವಾರ್ತೆ
Published 26 ಮಾರ್ಚ್ 2023, 8:41 IST
Last Updated 26 ಮಾರ್ಚ್ 2023, 8:41 IST
ಐಗಳಿ ಸಮೀಪದ ಅಡಹಳ್ಳಟ್ಟಿ ಗ್ರಾಮದ ತಾಂವಶಿ ತೋಟದಲ್ಲಿ 2ನೇ ಹಂತದ ₹95 ಕೋಟಿ ವೆಚ್ಚದಲ್ಲಿ ಕೆರೆ ತುಂಬುವ ನೀರಾವರಿ ಯೋಜನೆಯ ಉದ್ಘಾಟನಾ ಸಮಾರಂಭದಲ್ಲಿ ಲಕ್ಷ್ಮಣ ಸವದಿ ಮಾತನಾಡಿದರು
ಐಗಳಿ ಸಮೀಪದ ಅಡಹಳ್ಳಟ್ಟಿ ಗ್ರಾಮದ ತಾಂವಶಿ ತೋಟದಲ್ಲಿ 2ನೇ ಹಂತದ ₹95 ಕೋಟಿ ವೆಚ್ಚದಲ್ಲಿ ಕೆರೆ ತುಂಬುವ ನೀರಾವರಿ ಯೋಜನೆಯ ಉದ್ಘಾಟನಾ ಸಮಾರಂಭದಲ್ಲಿ ಲಕ್ಷ್ಮಣ ಸವದಿ ಮಾತನಾಡಿದರು   

ಐಗಳಿ: ‘ಅಥಣಿ ತಾಲ್ಲೂಕಿನ ಪೂರ್ವ ಭಾಗದ ಅಡಹಳ್ಳಿ, ಅಡಹಳ್ಳಟ್ಟಿ, ಕೋಹಳ್ಳಿ, ರಾಮತೀರ್ಥ ಸೇರಿದಂತೆ 8 ಗ್ರಾಮಗಳ ಕೆರೆ ತುಂಬಿಸುವ ಎರಡನೆಯ ₹95 ಕೋಟಿ ವೆಚ್ಚದ ಪ್ರಕ್ರಿಯೆ ಮುಗಿದಿದೆ. ಕಾಮಗಾರಿ ಕಾರ್ಯ ಈಗ ಪ್ರಾರಂಭವಾಗಲಿದೆ’ ಎಂದು ವಿಧಾನ ಪರಿಷತ್‌ ಸದಸ್ಯ ಲಕ್ಷ್ಮಣ ಸವದಿ ಹೇಳಿದರು.

ಸಮೀಪದ ಅಡಹಳ್ಳಟ್ಟಿ ಗ್ರಾಮದ ತಾಂವಶಿ ತೋಟದಲ್ಲಿ ಕೆರೆ ತುಂಬುವ ನೀರಾವರಿ ಯೋಜನೆಯ ಪೈಪ್‌ಲೈನ್ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ‘ಕರಿಮಸೂತಿ ಏತನೀರಾವರಿ ಕಾಲುವೆಯಿಂದ ವಂಚಿತವಾದ ಹಳ್ಳಿಗಳ ಭೂ ಪ್ರದೇಶಕ್ಕೆ ಸುಮಾರು ₹142 ಕೋಟಿ ವೆಚ್ಚದಲ್ಲಿ ಕೆರೆ ತುಂಬಿಸಲು ಪ್ರಥಮ ಹಂತದಲ್ಲಿ ₹49 ಕೋಟಿ ಈಗಾಗಲೇ ಬಿಡುಗಡೆಯಾಗಿದೆ. ಕಾಮಗಾರಿ ಮುಕ್ತಾಯ ಹಂತದಲ್ಲಿದೆ, 2ನೇ ಹಂತದ ಕಾಮಗಾರಿಗೆ ಆದಷ್ಟು ಬೇಗ ಪ್ರಾರಂಭಿಸಿ ಈ ಭಾಗ ಬರುವ ದಿನಗಳಲ್ಲಿ ಹಸಿರಾಗಲು ಕಾಲ ಸನ್ನಿಹಿತವಾಗಿದೆ’ ಎಂದರು.

ಅಡಹಳ್ಳಟ್ಟಿ ಪಿಕೆಪಿಎಸ್ ಅಧ್ಯಕ್ಷ ಶ್ರೀಶೈಲ ತಾಂವಶಿ ಮಾತನಾಡಿ, ‘ಲಕ್ಷ್ಮಣ ಸವದಿ ಅವರು ವಿಧಾನ ಪರಿಷತ್‌ ಸದಸ್ಯರಾಗಿದ್ದರೂ ರಾಜ್ಯದಲ್ಲಿಯೇ ಅತಿ ಹೆಚ್ಚು ಅನುದಾನ ತಂದಿದ್ದಾರೆ’ ಎಂದರು.

ADVERTISEMENT

ಸಿ.ಎಸ್.ನೇಮಗೌಡ, ರಮೇಶ ಗಾಣಿಗೇರ, ಸಿದರಾಯ ನಾಯಿಕ, ಚಿಕ್ಕನೀರಾವರಿ ಇಲಾಖೆ ಅಧಿಕಾರಿ ಎಸ್.ಎಸ್. ಮಾಕಾಣಿ, ಘಟಿವಾಳಪ್ಪ ಗುಡ್ಡಾಪುರ, ನೂರ್‌ ಅಹ್ಮದ್‌ ಡೊಂಗರಗಾಂವ ಹಲವರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.