ADVERTISEMENT

ಅಪಘಾತ: ಕಾಲ್‌ಸೆಂಟರ್‌ ಉದ್ಯೋಗಿ ಸಾವು

​ಪ್ರಜಾವಾಣಿ ವಾರ್ತೆ
Published 18 ಜುಲೈ 2024, 15:35 IST
Last Updated 18 ಜುಲೈ 2024, 15:35 IST
   

ಬೆಂಗಳೂರು: ಎಚ್‌ಎಸ್‌ಆರ್‌ ಲೇಔಟ್‌ 4ನೇ ಹಂತದ 15ನೇ ಕ್ರಾಸ್‌ನಲ್ಲಿ ಸ್ಕೂಟಿ ಹಾಗೂ ಶಾಲಾ ಬಸ್‌ ನಡವೆ ಗುರುವಾರ ಬೆಳಿಗ್ಗೆ ಸಂಭವಿಸಿದ ಅಪಘಾತದಲ್ಲಿ ಕಾಲ್‌ ಸೆಂಟರ್‌ ಉದ್ಯೋಗಿ ಮೃತಪಟ್ಟಿದ್ದಾರೆ.

ಕನಕಪುರ ರಸ್ತೆಯ ನಿವಾಸಿ ದರ್ಶನ್‌ ರಮೇಶ್‌ ಮೃತಪಟ್ಟ ಉದ್ಯೋಗಿ. 

‘ದೇವರಬೀಚನಹಳ್ಳಿಯಲ್ಲಿರುವ ಕಚೇರಿಗೆ ಎಚ್‌ಎಸ್‌ಆರ್‌ ಲೇಔಟ್‌ ಮೂಲಕ ದರ್ಶನ್ ಅವರು ಬೆಳಿಗ್ಗೆ 7.40ರ ಸುಮಾರಿಗೆ ಸ್ಕೂಟಿಯಲ್ಲಿ ತೆರಳುತ್ತಿದ್ದರು. ಅದೇ ವೇಳೆಗೆ ಎದುರಿನಿಂದ ವೇಗವಾಗಿ ಬಂದ ಬಸ್‌ ಹಾಗೂ ಸ್ಕೂಟಿ ನಡುವೆ ಅಪಘಾತ ಸಂಭವಿಸಿದೆ. ರಸ್ತೆ ಮೇಲೆ ಬಿದ್ದ ದರ್ಶನ್‌ ಅವರ ತಲೆಗೆ ಗಂಭೀರ ಗಾಯವಾಗಿತ್ತು. ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯದಲ್ಲಿ ಅವರು ಮೃತಪಟ್ಟಿದ್ದಾರೆ’ ಎಂದು ಸಂಚಾರ ಪೊಲೀಸರು ಹೇಳಿದರು. ಎಚ್ಎಸ್‌ಆರ್‌ ಲೇಔಟ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.