ಬೆಂಗಳೂರು: ಕಾಳೇನ ಅಗ್ರಹಾರ–ನಾಗವಾರವನ್ನು ಸಂಪರ್ಕಿಸುವ ‘ನಮ್ಮ ಮೆಟ್ರೊ’ ಗುಲಾಬಿ ಮಾರ್ಗದಲ್ಲಿ ಪಾಟರಿ ಟೌನ್ ಮೆಟ್ರೊ ನಿಲ್ದಾಣ ಕಾಮಗಾರಿಗಾಗಿ ನಿರ್ಮಿಸಿದ್ದ ತಾತ್ಕಾಲಿಕ ತಡೆಗೋಡೆ ಬುಧವಾರ ಮಳೆಗೆ ಕುಸಿದು ಬಿದ್ದಿದೆ. ಯಾವುದೇ ಪ್ರಾಣಾಪಾಯ ಉಂಟಾಗಿಲ್ಲ.
ಮೆಟ್ರೊ ನಿಲ್ದಾಣ ನಿರ್ಮಾಣಕ್ಕಾಗಿ ಮಣ್ಣು ಅಗೆಯಲು ತಾತ್ಕಾಲಿಕ ತಡೆಗೋಡೆಯನ್ನು ನಿರ್ಮಿಸಲಾಗಿತ್ತು. ಬುಧವಾರ ಸಂಜೆ 5.45ರ ಹೊತ್ತಿಗೆ ಸುರಿದ ಮಳೆಗೆ ತಡೆ ಕುಸಿದಿದೆ. ಇದರಿಂದ ಬೋರ್ ಬ್ಯಾಂಕ್ ರಸ್ತೆಯ ಒಂದು ಭಾಗಕ್ಕೆ ಹಾನಿಯಾಗಿದೆ. ಹಾಗಾಗಿ ಈ ರಸ್ತೆಯನ್ನು ಮುಚ್ಚಲಾಗಿದೆ. ರಸ್ತೆ ದುರಸ್ತಿಯಾಗುವವರೆಗೆ ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗ ಮಾಡಲಾಗಿದೆ ಎಂದು ಬಿಎಂಆರ್ಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.