ADVERTISEMENT

ಬೆಂಗಳೂರು: ಬೈಕ್ ಮೆಕ್ಯಾನಿಕ್ ಕೊಲೆ

​ಪ್ರಜಾವಾಣಿ ವಾರ್ತೆ
Published 10 ಮೇ 2024, 15:44 IST
Last Updated 10 ಮೇ 2024, 15:44 IST
   

ಬೆಂಗಳೂರು: ಬೈಕ್ ಮೆಕ್ಯಾನಿಕ್ ದಿಲೀಪ್ (34) ಎಂಬುವವರನ್ನು ಕೊಲೆ ಮಾಡಲಾಗಿದ್ದು, ಪರಿಚಯಸ್ಥರೇ ಕೃತ್ಯ ಎಸಗಿರುವ ಬಗ್ಗೆ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.

‘ಓಕಳಿಪುರ ಬಳಿಯ ರೈಲ್ವೆ ಸೇತುವೆ ಸಮೀಪದಲ್ಲಿ ಮೇ 1ರಂದು ಮೃತದೇಹ ಪತ್ತೆಯಾಗಿತ್ತು. ಆದರೆ, ಗುರುತು ಪತ್ತೆಯಾಗಿರಲಿಲ್ಲ. ಮೃತದೇಹದ ಫೋಟೊಗಳನ್ನು ನಗರ ಹಾಗೂ ಹೊರ ಜಿಲ್ಲೆಗಳ ಪೊಲೀಸ್ ಠಾಣೆಗಳಿಗೆ ಕಳುಹಿಸಲಾಗಿತ್ತು. ದಿಲೀಪ್‌ ಅವರದ್ದೇ ಮೃತದೇಹ ಎಂಬುದನ್ನು ಸಂಬಂಧಿಕರು ಗುರುತು ಹಿಡಿದಿದ್ದಾರೆ’ ಎಂದು ಶ್ರೀರಾಮಪುರ ಠಾಣೆ ಪೊಲೀಸರು ಹೇಳಿದರು.

‘ಎಲ್‌.ಎನ್‌.ಪುರದ ದಿಲೀಪ್ ಅವರನ್ನು ಕೊಲೆ ಮಾಡಿ, ಮೃತದೇಹವನ್ನು ಹಳಿ ಬಳಿ ಎಸೆದು ಹೋಗಿರುವ ಅನುಮಾನವಿದೆ. ಆರೋಪಿಗಳ ಪತ್ತೆಗಾಗಿ, ಹಳಿ ಸಮೀಪದ ಸಿ.ಸಿ.ಟಿ.ವಿ ಕ್ಯಾಮೆರಾ ದೃಶ್ಯ ಪರಿಶೀಲಿಸಲಾಗುತ್ತಿದೆ’ ಎಂದು ತಿಳಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.