ಬೆಂಗಳೂರು: ಬಿ.ಎಂ.ಶ್ರೀ. ಪ್ರತಿಷ್ಠಾನ ನೀಡುವ 2024ನೇ ಸಾಲಿನ ‘ಪ್ರೊ. ಎಲ್.ಎಸ್. ಶೇಷಗಿರಿರಾವ್ ವಿಮರ್ಶಾ ಪ್ರಶಸ್ತಿ’ಗೆ ವಿಮರ್ಶಕ ಮೀರಾಸಾಬಿಹಳ್ಳಿ ಶಿವಣ್ಣ ಮತ್ತು ‘ವಿ. ನಾಗರಾಜರಾವ್ ಸಮೂಹ ಮಾಧ್ಯಮ ಪ್ರಶಸ್ತಿ’ಗೆ ಪತ್ರಕರ್ತ ಈಶ್ವರ ದೈತೋಟ ಆಯ್ಕೆಯಾಗಿದ್ದಾರೆ.
ಈ ಪ್ರಶಸ್ತಿಗಳು ತಲಾ ₹ 10 ಸಾವಿರ ನಗದು ಮತ್ತು ಸ್ಮರಣಿಕೆ ಒಳಗೊಂಡಿವೆ. ಇದೇ 19ರಂದು ಬಿ.ಎಂ.ಶ್ರೀ. ಪ್ರತಿಷ್ಠಾನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದ್ದು, ಸಾಹಿತಿ ಕೆ. ಮರುಳಸಿದ್ದಪ್ಪ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಪ್ರತಿಷ್ಠಾನದ ಗೌರವ ಕಾರ್ಯದರ್ಶಿ ಡಾ. ಶಾಂತರಾಜು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.