ADVERTISEMENT

ಬಿಎಂಟಿಸಿ ಸಿಬ್ಬಂದಿ ನೇಣುಬಿಗಿದುಕೊಂಡು ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 16 ಜುಲೈ 2024, 14:40 IST
Last Updated 16 ಜುಲೈ 2024, 14:40 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಬೆಂಗಳೂರು: ಶಾಂತಿನಗರ ಬಸ್‌ ನಿಲ್ದಾಣದ ಸ್ಟೋರ್‌ ರೂಂನಲ್ಲಿ ಬಿಎಂಟಿಸಿ ಸಿಬ್ಬಂದಿಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬಿಎಂಟಿಸಿಯ ನೇಮಕಾತಿ ವಿಭಾಗದಲ್ಲಿ ಸಹಾಯಕರಾಗಿ ಕೆಲಸ ಮಾಡುತ್ತಿದ್ದ ಮೋಹನ್‌(42) ಆತ್ಮಹತ್ಯೆ ಮಾಡಿಕೊಂಡವರು.

ADVERTISEMENT

‘ವಿಜಯಪುರ ಜಿಲ್ಲೆಯ ಕೌಲಗಿ ಗ್ರಾಮದ ಮೋಹನ್‌, ಕಳೆದ ಕೆಲವು ವರ್ಷಗಳಿಂದ ಬಿಎಂಟಿಸಿಯಲ್ಲಿ ಕೆಲಸ ಮಾಡುತ್ತಿದ್ದರು. ಕೌಟುಂಬಿಕ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ’ ಎಂದು ಪೊಲೀಸರು ಹೇಳಿದರು.

‘ಸೋಮವಾರ ಸ್ಟೋರ್‌ ರೂಂನ ಕೀ ಪಡೆದು ಕೊಠಡಿಯ ಬಾಗಿಲು ಹಾಕಿಕೊಂಡಿದ್ದರು. ಅದಾದ ಮೇಲೆ ಹೊರಕ್ಕೆ ಬಂದಿರಲಿಲ್ಲ. ಅನುಮಾನಗೊಂಡ ಸಿಬ್ಬಂದಿ ಮಂಗಳವಾರ ಮಧ್ಯಾಹ್ನ ಕಿಟಕಿ ಮೂಲಕ ಪರಿಶೀಲನೆ ನಡೆಸಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ. ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ’ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ವಿಲ್ಸನ್‌ ಗಾರ್ಡನ್‌ ಪೊಲೀಸ್‌ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.