ADVERTISEMENT

ಬೆಂಗಳೂರು: ‘ಕೈವಾರ ತಾತಯ್ಯ ಜಯಂತಿ ಬಹಿಷ್ಕರಿಸಲು ಅಭಿಯಾನ’

​ಪ್ರಜಾವಾಣಿ ವಾರ್ತೆ
Published 23 ಫೆಬ್ರುವರಿ 2023, 4:33 IST
Last Updated 23 ಫೆಬ್ರುವರಿ 2023, 4:33 IST

ಬೆಂಗಳೂರು: ‘ರಾಜ್ಯ ಬಿಜೆಪಿ ಸರ್ಕಾರ ಬಲಿಜ ಸಮುದಾಯಕ್ಕೆ ಕೊಟ್ಟ ಮಾತಿನಂತೆ ಸಂಪೂರ್ಣ 2ಎ ಮೀಸಲಾತಿ ನೀಡಲ್ಲ. ಹೀಗಾಗಿ ಸರ್ಕಾರದಿಂದ ಆಚರಿಸಲಾಗುವ ಕೈವಾರ ತಾತಯ್ಯ ಜಯಂತಿ ಬಹಿಷ್ಕರಿಸಲು ಅಭಿಯಾನ ನಡೆಸಲಾಗುತ್ತಿದೆ’ ಎಂದು ಕರ್ನಾಟಕ ರಾಜ್ಯ ಬಲಿಜ ವೇದಿಕೆ ರಾಜ್ಯ ಘಟಕದ ಅಧ್ಯಕ್ಷ ಎನ್‌. ಮುನಿಕೃಷ್ಣ ಅವರು ಹೇಳಿದರು.

‘ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ 2ಎ ಮೀಸಲಾತಿಯನ್ನು ಶಿಕ್ಷಣಕ್ಕೆ
ಮಾತ್ರ ನೀಡಿದ್ದರು. ಸಾಮಾಜಿಕ, ಆರ್ಥಿಕ, ಔದ್ಯೋಗಿಕವಾಗಿಯೂ ಮೀಸಲಾತಿ ನೀಡಬೇಕು ಎಂದು ಸಮುದಾಯ ಹೋರಾಟ ನಡೆಸಿದೆ. ಆದರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜನಾಂಗದ ಬೇಡಿಕೆಯನ್ನು ಗಂಭೀರವಾಗಿ ಪರಿಗಣಿಸಿಲ್ಲ. ಹೀಗಾಗಿ, ಸರ್ಕಾರ ನಡೆಸುವ ಕೈವಾರ ತಾತಯ್ಯ ಜಯಂತಿಯನ್ನು ರಾಜ್ಯದಾದ್ಯಂತ ಬಹಿಷ್ಕಾರ ಹಾಕುವ ನಿರ್ಧಾರ ಕೈಗೊಳ್ಳಲಾಗಿದೆ’ ಎಂದು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT