ADVERTISEMENT

ಸಚಿವ ಪ್ರಿಯಾಂಕ್‌ ಖರ್ಗೆ ಹೆಸರು ಬಳಸಿ ಎಂಜಿನಿಯರ್‌ರಿಂದ ಹಣ ಸುಲಿಗೆ: ‌FIR ದಾಖಲು

​ಪ್ರಜಾವಾಣಿ ವಾರ್ತೆ
Published 28 ಅಕ್ಟೋಬರ್ 2024, 16:18 IST
Last Updated 28 ಅಕ್ಟೋಬರ್ 2024, 16:18 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಹಾಗೂ ಐ.ಟಿ–ಬಿ.ಟಿ ಸಚಿವ ಪ್ರಿಯಾಂಕ್‌ ಖರ್ಗೆ ಅವರ ಹೆಸರು ದುರ್ಬಳಕೆ ಮಾಡಿಕೊಂಡು ಹಣ ವಸೂಲಿ ಮಾಡಿದ್ದ ಆರೋಪದಡಿ ವ್ಯಕ್ತಿಯೊಬ್ಬರ ವಿರುದ್ಧ ವಿಧಾನಸೌಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಘುನಂದನ್‌ ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿದೆ.

ADVERTISEMENT

ಸಚಿವರ ವಿಶೇಷ ಕರ್ತವ್ಯಾಧಿಕಾರಿ ನಾಗರಾಜ್‌ ಅವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಆರೋಪಿಗೆ ಹುಡುಕಾಟ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.

‘ಚಳ್ಳಕೆರೆ ಉಪ ವಿಭಾಗದ ಪಂಚಾಯತ್‌ರಾಜ್‌ ಇಲಾಖೆ ಎಂಜಿನಿಯರ್‌ ಎನ್‌.ಕಾವ್ಯಾ ಅವರು ಸ್ಥಳ ನಿರೀಕ್ಷಣೆಯಲ್ಲಿ ಇದ್ದರು. ಸ್ಥಳ ನಿರೀಕ್ಷಣೆಯ ಮಾಹಿತಿ ತಿಳಿದು ಅ.14ರಂದು ಆರೋಪಿ ರಘುನಂದನ್‌ ಕರೆ ಮಾಡಿ, ಸಚಿವರ ಆಪ್ತ ಸಹಾಯಕ ಹಾಗೂ ವಿಶೇಷಾಧಿಕಾರಿ ಎಂದು ಕಾವ್ಯಾ ಅವರ ಬಳಿ ಪರಿಚಯಿಸಿಕೊಂಡಿದ್ದರು. ಕಾವ್ಯಾ ಅವರ ವರ್ಗಾವಣೆಗೆ ಸಂಬಂಧಿಸಿದಂತೆ ₹2 ಲಕ್ಷಕ್ಕೆ ಬೇಡಿಕೆ ಇಟ್ಟು ಬೆದರಿಸಿದ್ದರು. ನಂತರ, ಫೋನ್‌ ಪೇ ಮೂಲಕ ₹80 ಸಾವಿರ ಪಡೆದಿದ್ದರು’ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.