ADVERTISEMENT

ಅಲ್ಲಮಪ್ರಭು ಬೆಟ್ಟದೂರುಗೆ ‘ಚಂಪಾ ಸಿರಿಗನ್ನಡ’ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 8 ಜೂನ್ 2024, 16:15 IST
Last Updated 8 ಜೂನ್ 2024, 16:15 IST
<div class="paragraphs"><p>ಅಲ್ಲಮಪ್ರಭು ಬೆಟ್ಟದೂರು</p></div>

ಅಲ್ಲಮಪ್ರಭು ಬೆಟ್ಟದೂರು

   

ಬೆಂಗಳೂರು: ಕರ್ನಾಟಕ ಸ್ವಾಭಿಮಾನಿ ವೇದಿಕೆ ನೀಡುವ ‘ಚಂಪಾ ಸಿರಿಗನ್ನಡ ಪ್ರಶಸ್ತಿ’ಗೆ ಸಾಹಿತಿ ಅಲ್ಲಮಪ್ರಭು ಬೆಟ್ಟದೂರು ಆಯ್ಕೆಯಾಗಿದ್ದಾರೆ.

ಪ್ರಶಸ್ತಿಯು ₹10 ಸಾವಿರ ನಗದು, ಕಂಚಿನ ಫಲಕ ಒಳಗೊಂಡಿದೆ.

ADVERTISEMENT

‘ಬೆಂಗಳೂರಿನ ನಯನ ಸಭಾಂಗಣದಲ್ಲಿ ಜೂನ್‌ 20ರಂದು ನಡೆಯುವ ಕಾರ್ಯಕ್ರಮದಲ್ಲಿ ಸಾಹಿತಿ ಬರಗೂರು ರಾಮಚಂದ್ರಪ್ಪ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಸಾಹಿತಿ ಹಂ.ಪ. ನಾಗರಾಜಯ್ಯ ಅವರು ಅಧ್ಯಕ್ಷತೆ ವಹಿಸಲಿದ್ದು, ಕನ್ನಡ ಜನಶಕ್ತಿ ಕೇಂದ್ರದ ಅಧ್ಯಕ್ಷ ಸಿ.ಕೆ. ರಾಮೇಗೌಡ ಅವರು ಅತಿಥಿಯಾಗಿ ಭಾಗವಹಿಸಿದ್ದಾರೆ’ ಎಂದು ವೇದಿಕೆಯ ಅಧ್ಯಕ್ಷ ಶಂಕರ್ ಹೂಗಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.