ADVERTISEMENT

ಬಸ್ ಪ್ರಯಾಣ ದರ ಹೆಚ್ಚಳ ನಿರ್ಧರಿಸಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 24 ಆಗಸ್ಟ್ 2024, 16:12 IST
Last Updated 24 ಆಗಸ್ಟ್ 2024, 16:12 IST
ಸಿದ್ದರಾಮಯ್ಯ, ಮುಖ್ಯಮಂತ್ರಿ
ಸಿದ್ದರಾಮಯ್ಯ, ಮುಖ್ಯಮಂತ್ರಿ   

ಬೆಂಗಳೂರು: ಬಸ್ ಪ್ರಯಾಣ ದರಗಳನ್ನು ಹೆಚ್ಚಿಸುವ ಕುರಿತು ಯಾವುದೇ ತೀರ್ಮಾನ ಇನ್ನೂ ಕೈಗೊಂಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ನೀರಿನ ದರವನ್ನೂ ಬಹಳ ವರ್ಷಗಳಿಂದ ಏರಿಸಿಲ್ಲ. ಜಲಮಂಡಳಿಯಲ್ಲಿ ಕಷ್ಟದ ಪರಿಸ್ಥಿತಿಯಿದ್ದು, ದರಗಳನ್ನು ಹೆಚ್ಚಿಸುವ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಸರ್ಕಾರ ಸಲ್ಲಿಸಿದ ಮಸೂದೆಗಳಿಗೆ ಸ್ಪಷ್ಟೀಕರಣ ಕೋರಿ ರಾಜ್ಯಪಾಲರು ವಾಪಸ್‌ ಕಳಿಸಿದ್ದಾರೆ. ಈ ಬಗ್ಗೆ ಮತ್ತೊಮ್ಮೆ ಸಚಿವ ಸಂಪುಟದಲ್ಲಿ ಚರ್ಚಿಸಲಾಗುವುದು. ಈ ಮಸೂದೆಗಳು ವಿಧಾನಸಭೆ ಹಾಗೂ ವಿಧಾನಪರಿಷತ್ತಿನಲ್ಲಿ ಅಂಗೀಕೃತಗೊಂಡಿದ್ದವು ಎಂದರು. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.