ADVERTISEMENT

ಯಲಹಂಕ: ಮನಸೆಳೆದ ಜಾಗೃತಿ ಗೀತೆಗಳ ನೃತ್ಯ

​ಪ್ರಜಾವಾಣಿ ವಾರ್ತೆ
Published 1 ಫೆಬ್ರುವರಿ 2024, 15:56 IST
Last Updated 1 ಫೆಬ್ರುವರಿ 2024, 15:56 IST
ಯಲಹಂಕದಲ್ಲಿ ವಿಶ್ವ ವಿದ್ಯಾಪೀಠ ಶಾಲೆಯ ಮಕ್ಕಳು ಜಾಗೃತಿ ಮೂಡಿಸುವ ಗೀತೆಗಳಿಗೆ ನೃತ್ಯಗಳನ್ನು ಪ್ರಸ್ತುತಪಡಿಸಿದರು. 
ಯಲಹಂಕದಲ್ಲಿ ವಿಶ್ವ ವಿದ್ಯಾಪೀಠ ಶಾಲೆಯ ಮಕ್ಕಳು ಜಾಗೃತಿ ಮೂಡಿಸುವ ಗೀತೆಗಳಿಗೆ ನೃತ್ಯಗಳನ್ನು ಪ್ರಸ್ತುತಪಡಿಸಿದರು.    

ಯಲಹಂಕ: ಸಂದೀಪ್‌ ಉನ್ನಿಕೃಷ್ಣನ್‌ ವೃತ್ತದ ಬಳಿಯಿರುವ ಡಾ.ಬಿ.ಆರ್‌. ಅಂಬೇಡ್ಕರ್‌ ಉದ್ಯಾನದ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿಶ್ವ ವಿದ್ಯಾಪೀಠ ಶಾಲೆಯ ಮಕ್ಕಳು, ಜಾಗೃತಿ ಮೂಡಿಸುವ ಹಲವು ಗೀತೆಗಳಿಗೆ ನೃತ್ಯ ಪ್ರಸ್ತುತಪಡಿಸಿದರು.

ವಿವಿಧ ವೇಷಭೂಷಣಗಳಿಂದ ಕಂಗೊಳಿಸುತ್ತಿದ್ದ ಮಕ್ಕಳು, ಭಾರತದ ಸಂಸ್ಕೃತಿ, ದೇಶಭಕ್ತಿ ಹಾಗೂ ಪರಿಸರ ಕುರಿತ ಗೀತೆಗಳಿಗೆ ನೃತ್ಯಮಾಡುವ ಮೂಲಕ ಜನರ ಗಮನ ಸೆಳೆದರು. ಭಾಷಣ ಮತ್ತು ಬೀದಿನಾಟಕದ ಜೊತೆಗೆ ರೈತರು ಹಾಗೂ ಸೈನಿಕರ ಸಮಸ್ಯೆಗಳನ್ನು ಹರಿಕಥೆಯ ಮೂಲಕ ಪ್ರಸ್ತುತಪಡಿಸಿದರು.

ಕನ್ನಡ ಶಿಕ್ಷಕಿ ಶಶಿಕಲಾ ಎಂ.ವಿ. ಮಾತನಾಡಿ, ‘ಮಕ್ಕಳಲ್ಲಿ ಪ್ರಾಥಮಿಕ ಹಂತದಿಂದಲೇ ದೇಶಭಕ್ತಿ, ರೈತರ ಮತ್ತು ಸೈನಿಕರ ಸಮಸ್ಯೆಗಳು, ಭಾರತದ ಕಲೆ, ಸಂಸ್ಕೃತಿ ಹಾಗೂ ಪರಿಸರದ ಕುರಿತು ಜಾಗೃತಿ ಮೂಡಿಸಲು ಇಂತಹ ಗೀತೆಗಳನ್ನು ಆಯ್ಕೆಮಾಡಿಕೊಂಡು ನೃತ್ಯದ ಮೂಲಕ ಪ್ರಸ್ತುತಪಡಿಸಲಾಗಿದೆ’ ಎಂದು ತಿಳಿಸಿದರು.

ADVERTISEMENT

ಶಾಲೆಯ ನಿರ್ದೇಶಕಿ ಸುಶೀಲ ಸಂತೋಷ್‌, ಪ್ರಾಂಶುಪಾಲರಾದ ರೂಪಾ, ಮುಖ್ಯಶಿಕ್ಷಕಿ ರಿಚಾ ಕಾರಬನ್‌ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.