ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಸೋಮವಾರದಂದು (ಸೆಪ್ಟಂಬರ್ 9) 1.32 ಲಕ್ಷ ಗಣೇಶ ಮೂರ್ತಿಗಳನ್ನು ವಿಸರ್ಜಿಸಲಾಗಿದೆ.
ಮೊಬೈಲ್ ಟ್ಯಾಂಕರ್ ಹಾಗೂ ಕೆರೆ ಅಂಗಳದ ಶಾಶ್ವತ/ ತಾತ್ಕಾಲಿಕ ಕಲ್ಯಾಣಿಗಳಲ್ಲಿ ಮೂರ್ತಿಗಳನ್ನು ವಿಸರ್ಜಿಸಲಾಗಿದೆ.
ದಕ್ಷಿಣ ವಲಯದಲ್ಲಿ 62,246, ಪೂರ್ವದಲ್ಲಿ 29,586, ಪಶ್ಚಿಮದಲ್ಲಿ 15,516, ಯಲಹಂಕದಲ್ಲಿ 8,732, ಆರ್.ಆರ್.ನಗರದಲ್ಲಿ 6,716, ಮಹದೇವಪುರದಲ್ಲಿ 4,899, ಬೊಮ್ಮನಹಳ್ಳಿಯಲ್ಲಿ 3,790 ಹಾಗೂ ದಾಸರಹಳ್ಳಿ ವಲಯದಲ್ಲಿ 668 ಮೂರ್ತಿಗಳು ವಿಸರ್ಜನೆಯಾಗಿವೆ ಎಂದು ಬಿಬಿಎಂಪಿ ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.