ಬೆಂಗಳೂರು: ಮೆಜೆಸ್ಟಿಕ್ನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದ ಪಾರ್ಕಿಂಗ್ ಪ್ರದೇಶದಲ್ಲಿ ಜುಲೈ 3ರಂದು ಶವವಾಗಿ ಪತ್ತೆಯಾಗಿದ್ದ ಐದು ವರ್ಷದ ಬಾಲಕಿಯನ್ನು ಬಲವಾದ ಆಯುಧದಿಂದ ಹೊಡೆದು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೊಲೆಯಾದ ಬಾಲಕಿ ಮರಿಯಮ್. ಮರುದಿನವೇ ಆಕೆಯ ತಂದೆ ಶಿವು ಮೃತದೇಹವನ್ನು ಗುರುತಿಸಿದ್ದರು. ಬಾಲಕಿಯ ತಾಯಿ ಹೀನಾ, ಪತಿ ಶಿವು ಅವರನ್ನು ತೊರೆದು ಪ್ರಿಯಕರ ರಾಜು ಎಂಬಾತನ ಜೊತೆ ವಾಸವಿದ್ದರು. ರೈಲ್ವೆ ನಿಲ್ದಾಣ, ದರ್ಗಾ ಬಳಿ ಭಿಕ್ಷಾಟನೆ ಮಾಡಿಕೊಂಡಿದ್ದ ಹೀನಾ, ರಾಜು ಜೊತೆಯಲ್ಲಿಯೇ ಮರಿಯಮ್ ಸಹ ಇದ್ದಳು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಆದರೆ, ಮರಿಯಮ್ ಶವ ಪತ್ತೆಯಾದ ದಿನದಿಂದಲೂ ಹೀನಾ ಮತ್ತು ರಾಜು ತಲೆಮರೆಸಿಕೊಂಡಿದ್ದಾರೆ. ಇಬ್ಬರೂ ಸೇರಿ ಬಾಲಕಿಯನ್ನು ಹತ್ಯೆಗೈದಿರುವ ಶಂಕೆ ಇದೆ. ಬೆಂಗಳೂರು ಕೇಂದ್ರ ರೈಲ್ವೆ ಠಾಣಾ ಪೊಲೀಸರು ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗೆ ಹುಡುಕಾಟ ನಡೆಸುತ್ತಿದ್ದಾರೆ. ಈ ಇಬ್ಬರ ಬಗ್ಗೆ ಮಾಹಿತಿ ನೀಡಿದವರಿಗೆ ಬಹುಮಾನ ನೀಡಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.