ಬೆಂಗಳೂರು: ವೃದ್ಧೆಯರನ್ನೇ ಗುರಿಯಾಗಿಸಿ ಸರಗಳ್ಳತನ ಮಾಡುತ್ತಿದ್ದ ಕಳ್ಳನನ್ನು ರಾಜರಾಜೇಶ್ವರಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಸುರೇಶ್ ಅಲಿಯಾಸ್ ಸೂರ್ಯ (28) ಬಂಧಿತ.
ಬಂಧಿತನಿಂದ ₹3.12 ಲಕ್ಷ ಮೌಲ್ಯದ 50 ಗ್ರಾಂ ಚಿನ್ನದ ಸರ ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು.
ಆರೋಪಿಯು ಸ್ಕೂಟರ್ನಲ್ಲಿ ಸಂಚರಿಸುತ್ತಾ ಒಂಟಿಯಾಗಿ ಓಡಾಡುತ್ತಿದ್ದ ವೃದ್ಧೆಯರನ್ನೇ ಗುರಿಯಾಗಿಸಿ ಮಾಂಗಲ್ಯ ಸೇರಿದಂತೆ ಚಿನ್ನದ ಸರಗಳನ್ನು ಕಸಿದುಕೊಂಡು ಪರಾರಿಯಾಗುತ್ತಿದ್ದ. ಇತ್ತೀಚೆಗೆ ಆರ್.ಆರ್. ನಗರದ ಕುವೆಂಪು ವೃತ್ತದಲ್ಲಿ ವೃದ್ಧೆಯೊಬ್ಬರು ನಡೆದುಕೊಂಡು ಹೋಗುತ್ತಿದ್ದಾಗ ಚಿನ್ನದ ಸರ ಕಸಿದುಕೊಂಡು ಪರಾರಿಯಾಗಿದ್ದ. ಆರೋಪಿ ವಿರುದ್ಧ ಆರ್.ಆರ್. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.