ADVERTISEMENT

ವಂಚನೆ: ತಲೆಮರೆಸಿಕೊಂಡಿರುವ ಹೆಡ್‌ಕಾನ್‌ಸ್ಟೆಬಲ್‌

​ಪ್ರಜಾವಾಣಿ ವಾರ್ತೆ
Published 28 ಅಕ್ಟೋಬರ್ 2024, 16:24 IST
Last Updated 28 ಅಕ್ಟೋಬರ್ 2024, 16:24 IST
<div class="paragraphs"><p>ವಂಚನೆ</p></div>

ವಂಚನೆ

   

ಬೆಂಗಳೂರು: ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ಆಮಿಷವೊಡ್ಡಿ ಹಣ ಪಡೆದು ವಂಚಿಸಿದ್ದ ಆರೋಪದ ಮೇಲೆ ದಾಖಲಾದ ಪ್ರಕರಣದ ಸಂಬಂಧ ಸಶಸ್ತ್ರ ಮೀಸಲು ಪೊಲೀಸ್ ಪಡೆ ಪ್ರಧಾನ ಕಚೇರಿಯ ಹೆಡ್​​ ಕಾನ್‌ಸ್ಟೇಬಲ್ ಪ್ರಶಾಂತ್ ಕುಮಾರ್ ಅವರಿಗಾಗಿ ನಂದಿನಿ ಲೇಔಟ್‌ ಠಾಣೆಯ ಪೊಲೀಸರು ಹುಡುಕಾಟ ನಡೆಸುತ್ತಿದ್ಧಾರೆ.

ಮಹಾಲಕ್ಷ್ಮಿ ಲೇಔಟ್‌ ನಿವಾಸಿ ಭಾಗ್ಯಮ್ಮ‌ ಎಂಬುವವರು ನೀಡಿದ ದೂರು ಆಧರಿಸಿ ಪ್ರಶಾಂತ್ ಕುಮಾರ್, ದೀಪಾ, ಮಂಜುನಾಥ್ ಪ್ರಸಾದ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ADVERTISEMENT

‘ನೋಟಿಸ್‌ ಜಾರಿಗೂ ಆರೋಪಿ ಸಿಕ್ಕಿಲ್ಲ. ಪ್ರಶಾಂತ್‌ ಕುಮಾರ್‌ಗಾಗಿ ಶೋಧ ನಡೆಸಲಾಗುತ್ತಿದೆ’ ಎಂದು ಪೊಲೀಸರು ಹೇಳಿದರು.

‘2011ರಲ್ಲಿ ಪರಿಚಯವಾಗಿದ್ದ ಪ್ರಶಾಂತ್ ಕುಮಾರ್ ಅವರಿಗೆ ನನ್ನ ಇಬ್ಬರು ಮಕ್ಕಳಿಗೆ ಸರ್ಕಾರಿ ಕೆಲಸ ಕೊಡಿಸುವಂತೆ ಕೇಳಿದ್ದೆ. ಆಗ ತನಗೆ ಹಲವು ಸರ್ಕಾರಿ ಅಧಿಕಾರಿಗಳು ಪರಿಚಯವಿದ್ದು, ಕೆಲಸ ಕೊಡಿಸುತ್ತೇನೆ ಎಂದು ಭರವಸೆ ನೀಡಿದ್ದರು. ಮೂರು ತಿಂಗಳಲ್ಲಿ ಎಫ್​ಡಿಎ, ಎಸ್​ಡಿಎ ಶ್ರೇಣಿಯ ಕೆಲಸ ಕೊಡಿಸುವುದಾಗಿ ಹೇಳಿ ₹25 ಲಕ್ಷ ನಗದು ನೀಡುವಂತೆ ಬೇಡಿಕೆ ಇಟ್ಟಿದ್ದರು. ನಂತರ, ಮಂಜುನಾಥ್ ಪ್ರಸಾದ್ ಎಂಬಾತನನ್ನು ತನ್ನ ಆಪ್ತ ಸಹಾಯಕ ಎಂದು ಪ್ರಶಾಂತ್ ಪರಿಚಯ ಮಾಡಿಸಿದ್ದರು’ ಎಂದು ಭಾಗ್ಯಮ್ಮ ದೂರಿನಲ್ಲಿ ತಿಳಿಸಿದ್ದಾರೆ.

‘ಹಂತ ಹಂತವಾಗಿ ಒಟ್ಟು₹47 ಲಕ್ಷ ನಗದು , 857 ಗ್ರಾಂ. ಚಿನ್ನಾಭರಣವನ್ನೂ ಪಡೆದಿದ್ದು, ಯಾವುದೇ ಸರ್ಕಾರಿ ನೌಕರಿ ಕೊಡಿಸಿಲ್ಲ' ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.