ಬೆಂಗಳೂರು: ಮನೆಯಲ್ಲಿ ಚಿನ್ನಾಭರಣ ಕಳವು ಮಾಡಿ ತಲೆಮರೆಸಿಕೊಂಡಿದ್ದ
ಇಬ್ಬರು ಆರೋಪಿಗಳನ್ನು ರಾಜಗೋಪಾಲನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಮಣಿಕಂಠ ಹಾಗೂ ಅಭಿಷೇಕ್ ಬಂಧಿತ ಆರೋಪಿಗಳು. ಬಂಧಿತರಿಂದ ₹7.5 ಲಕ್ಷ ಮೌಲ್ಯದ 121 ಗ್ರಾಂ ಚಿನ್ನ, ₹1 ಲಕ್ಷ ನಗದು ಜಪ್ತಿ ಮಾಡಲಾಗಿದೆ.
ಲಗ್ಗರೆಯ ಮನೆಯೊಂದರಲ್ಲಿ ಡಿ.12ರಂದು ಚಿನ್ನಾಭರಣ ಹಾಗೂ ನಗದು ಕಳವು ಮಾಡಿದ್ದರು. ಇದೇ ಪ್ರಕರಣದಲ್ಲಿ ಡಿ.18ರಂದು ನಾಲ್ವರು ಆರೋಪಿಗಳನ್ನು ಬಂಧಿಸಲಾಗಿತ್ತು. ಅವರಿಂದ ₹12 ಲಕ್ಷ ಮೌಲ್ಯದ 254 ಚಿನ್ನಾಭರಣ ಜಪ್ತಿ ಮಾಡಲಾಗಿತ್ತು. ಈಗ ಬಂಧನವಾದ ಇಬ್ಬರ ಪೈಕಿ ಒಬ್ಬನ ಹೆಸರು ರೌಡಿ ಪಟ್ಟಿಯಲ್ಲಿದೆ. ಆತನ ವಿರುದ್ಧ ಪೀಣ್ಯ, ಮಹಾಲಕ್ಷ್ಮಿಲೇಔಟ್, ಬ್ಯಾಡರಹಳ್ಳಿ, ಗಂಗಮ್ಮನಗುಡಿ, ರಾಜಗೋಪಾಲನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿವೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.