ಬೆಂಗಳೂರು: ಕರ್ನಾಟಕ ರಾಜ್ಯೋತ್ಸವದ ಸುವರ್ಣ ಸಂಭ್ರಮದ ಪ್ರಯುಕ್ತ ಕಲಾ ದರ್ಪಣ ಆರ್ಟ್ ರಿಫ್ಲೆಕ್ಟ್ಸ್ ಸಂಸ್ಥೆಯು ಮಕ್ಕಳಿಗೆ ಇದೇ 27ರಂದು ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆ ಹಮ್ಮಿಕೊಂಡಿದೆ.
ಸ್ಪರ್ಧೆಯಲ್ಲಿ 8ರಿಂದ 18 ವರ್ಷದೊಳಗಿನವರು ಭಾಗವಹಿಸಬಹುದಾಗಿದ್ದು, ವಯೋಮಿತಿ ಆಧಾರದಲ್ಲಿ ಮೂರು ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದೆಎಂದು ಸಂಸ್ಥೆಯ ಕಾರ್ಯದರ್ಶಿ ವಿನಾಯಕ ಪಾಟೀಲ್ ತಿಳಿಸಿದ್ದಾರೆ.
ಸ್ಪರ್ಧೆಗೆ ಹೆಸರು ನೋಂದಾಯಿಸಿ ಕೊಳ್ಳಲು ಇದೇ 20 ಕೊನೆಯ ದಿನ ವಾಗಿದ್ದು, ಆಸಕ್ತರು ಮೊಬೈಲ್ ಸಂಖ್ಯೆ 93806 71947ಕ್ಕೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.