ADVERTISEMENT

ಕೆಎಸ್‌ಆರ್‌ಟಿಸಿಯ ಚಾಲಕ ಕಂ ನಿರ್ವಾಹಕ ಹುದ್ದೆ: ಜು.13ಕ್ಕೆ ದೇಹದಾರ್ಢ್ಯ ಪರೀಕ್ಷೆ

​ಪ್ರಜಾವಾಣಿ ವಾರ್ತೆ
Published 8 ಜುಲೈ 2024, 16:28 IST
Last Updated 8 ಜುಲೈ 2024, 16:28 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಬೆಂಗಳೂರು: ಕೆಎಸ್‌ಆರ್‌ಟಿಸಿಯ ಚಾಲಕ ಕಂ ನಿರ್ವಾಹಕ ಹುದ್ದೆಗೆ ಅರ್ಜಿ ಸಲ್ಲಿಸಿರುವವರಿಗೆ ಮೂಲ ದಾಖಲೆ ಹಾಗೂ ದೇಹದಾರ್ಢ್ಯ ಪರಿಶೀಲನೆಗೆ ಜುಲೈ 13ರಂದು ಅವಕಾಶ ನೀಡಲಾಗಿದೆ. ಇದು ಕೊನೆಯ ಅವಕಾಶವಾಗಿದೆ.

ಇದುವರೆವಿಗೂ ದಾಖಲಾತಿ ಪರಿಶೀಲನೆಗೆ ಹಾಜರಾಗದ ಅಭ್ಯರ್ಥಿಗಳು ನಿಗಮದ ವೆಬ್‌ಸೈಟ್  ksrtcjobs.karnataka.gov.in ನಲ್ಲಿ ಅಂತಿಮ ಕರೆಪತ್ರವನ್ನು ಡೌನ್‌ಲೋಡ್‌ ಮಾಡಿ, ಮೂಲ ದಾಖಲೆಗಳೊಂದಿಗೆ ಅಂದು ಪರಿಶೀಲನೆಗೆ ಹಾಜರಾಗಬೇಕು ಎಂದು ಕೆಎಸ್‌ಆರ್‌ಟಿಸಿ ನೇಮಕಾತಿ ಸಮಿತಿ ಅಧ್ಯಕ್ಷರಾಗಿರುವ ಸಿಬ್ಬಂದಿ ಮತ್ತು ಜಾಗೃತ ವಿಭಾಗದ ನಿರ್ದೇಶಕರು ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.