ADVERTISEMENT

ಲೋಕಸಭಾ ಚುನಾವಣೆ | ಮತದಾನ ಜಾಗೃತಿಗಾಗಿ ಕಾಲ್ನಡಿಗೆ ಜಾಥಾ

​ಪ್ರಜಾವಾಣಿ ವಾರ್ತೆ
Published 21 ಏಪ್ರಿಲ್ 2024, 15:37 IST
Last Updated 21 ಏಪ್ರಿಲ್ 2024, 15:37 IST
ಕಬ್ಬನ್‌ ಪಾರ್ಕ್‌ ಬಳಿ ಮತದಾನದ ಜಾಗೃತಿ ಜಾಥಾ ನಡೆಯಿತು
ಕಬ್ಬನ್‌ ಪಾರ್ಕ್‌ ಬಳಿ ಮತದಾನದ ಜಾಗೃತಿ ಜಾಥಾ ನಡೆಯಿತು   

ಬೆಂಗಳೂರು: ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ದಿ ಸಂಘದಿಂದ ಸಾರ್ವಜನಿಕರಲ್ಲಿ ಮತದಾನದ ಜಾಗೃತಿ ಮೂಡಿಸಲು ಭಾನುವಾರ ಕಾಲ್ನಡಿಗೆ ಜಾಥಾ ನಡೆಯಿತು.

ನಗರ ಪೊಲೀಸ್ ಕಮಿಷನರ್‌ ಬಿ.ದಯಾನಂದ್ ಮಾತನಾಡಿ, ‘ಬೆಂಗಳೂರು ನಗರದಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಡಿಮೆ ಮತದಾನವಾಗಿದೆ. ಎಲ್ಲರೂ ಮತಗಟ್ಟೆಗೆ ಬಂದು ಕಡ್ಡಾಯವಾಗಿ ಮತ ಚಲಾಯಿಸಬೇಕು. ಮತದಾರರಿಗೆ ಯಾವುದೇ ತೊಂದರೆಯಾಗದಂತೆ ಬಂದೋಬಸ್ತು ಮಾಡಲಾಗಿದೆ’ ಎಂದು ತಿಳಿಸಿದರು.

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿ ಸ್ನೇಹಲ್ ಮಾತನಾಡಿ, ‘ಚುನಾವಣೆ, ದೇಶದ ಮುಂದಿನ ಐದು ವರ್ಷದ ಭವಿಷ್ಯವನ್ನು ರೂಪಿಸುವ ಕಾರ್ಯ’ ಎಂದು ಹೇಳಿದರು.

ADVERTISEMENT

ಜಾಥಾ ಕಬ್ಬನ್‌ ಪಾರ್ಕ್ ಮುಖ್ಯದ್ವಾರದಿಂದ ಆರಂಭವಾಗಿ ಕಸ್ತೂರಬಾ ರಸ್ತೆ, ಕಂಠೀರವ ಒಳಾಂಗಣ ರಸ್ತೆ, ರಾಜಾರಾಂ ಮೋಹನ್ ರಾಯ್ ರಸ್ತೆ ಮೂಲಕ ಸಾಗಿ ಬಿಬಿಎಂಪಿ ಸಹಕಾರ ಸಂಘದ ಬಳಿ ಮುಕ್ತಾಯವಾಯಿತು.

ಬೆಂಗಳೂರು ಕೇಂದ್ರ ಚುನಾವಣಾಧಿಕಾರಿ ಡಾ.ಹರೀಶ್ ಕೆ., ಸಂಘದ ಅಧ್ಯಕ್ಷ ಎ.ಅಮೃತ್ ರಾಜ್, ಪದಾಧಿಕಾರಿಗಳಾದ ಸಾಯಿಶಂಕರ್, ಎ.ಜಿ. ಬಾಬಣ್ಣ, ಮಂಜುನಾಥ್, ಎಚ್.ಬಿ. ಹರೀಶ್ ಕೆ. ನರಸಿಂಹ, ರೇಣುಕಾಂಬ, ಕೆ. ಮಂಜೇಗೌಡ, ಡಾ.ಶೋಭಾ, ಮಂಜುನಾಥ್, ಸಂತೋಷ್ ಕುಮಾರ್ ನಾಯ್ಕ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.