ಯಲಹಂಕ: ಇತಿಹಾಸ ಪ್ರಸಿದ್ಧ ವಹ್ನಿಕುಲ ಕ್ಷತ್ರಿಯ ಆರಾಧ್ಯದೇವಿ ಮಹೇಶ್ವರಮ್ಮನವರ ಹೂವಿನ ಕರಗ ಮಹೋತ್ಸವ ಹಾಗೂ ವಿವಿಧ ದೇವರ ಪಲ್ಲಕ್ಕಿ ಉತ್ಸವ ವಿಜೃಂಭಣೆಯಿಂದ ನಡೆಯಿತು.
ಬಜಾರ್ ರಸ್ತೆಯಲ್ಲಿರುವ ಮಹೇಶ್ವರಮ್ಮನವರ ದೇವಾಲಯದಿಂದ ಬುಧವಾರ ರಾತ್ರಿ 1.40ಕ್ಕೆ ಹೊರಟ ಹೂವಿನ ಕರಗ, ಕೋಟೆಬೀದಿ, ಬೆಸ್ತರಬೀದಿ, ಕಾಮಾಕ್ಷಮ್ಮ ಬಡಾವಣೆ, ಹೊಸಬೀದಿ, ಗಾಂಧಿನಗರ, ಮನ್ವಂತರ ತೋಟ, ಡೌನ್ ಬಜಾರ್ ರಸ್ತೆ, ಮಾರುತಿನಗರ, ವೆಂಕಟಾಲ ಮತ್ತಿತರ ಬಡಾವಣೆಗಳಲ್ಲಿ ಸಂಚರಿಸಿ, ಗುರುವಾರ ಬೆಳಿಗ್ಗೆ 8 ಗಂಟೆಗೆ ಮತ್ತೆ ದೇವಾಲಯಕ್ಕೆ ಆಗಮಿಸಿತು.
ಶಕ್ತಿದೇವತೆ ಮಹೇಶ್ವರಮ್ಮನವರ ಕರಗ, ಮನೆಗಳ ಮುಂಭಾಗಕ್ಕೆ ಬಂದಾಗ ಮಹಿಳೆಯರು ಆರತಿ ಬೆಳಗಿ ಹೂವಿನ ಅರ್ಚನೆ ಮಾಡಿ ಸ್ವಾಗತಿಸಿದರು. ಸುತ್ತಮುತ್ತಲಿನ ಗ್ರಾಮಗಳ 27 ದೇವರ ಅಲಂಕೃತಗೊಂಡಿದ್ದ ಮುತ್ತಿನ ಪಲ್ಲಕ್ಕಿ ಉತ್ಸವ ಕರಗ ಮಹೋತ್ಸವಕ್ಕೆ ವಿಶೇಷ ಮೆರುಗು ನೀಡಿತು. ಸಾವಿರಾರು ಜನರು ಕರಗ ವೀಕ್ಷಿಸಿದರು. ಅಯ್ಯಪ್ಪ ಅವರು ಐದನೇ ಬಾರಿಗೆ ಗರಗ ಹೊತ್ತಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.