ಯಲಹಂಕ: ಮೈಲಪ್ಪನಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಲಕ್ಷ್ಮಣ, ಆಂಜನೇಯಸ್ವಾಮಿ ಸಮೇತ ಸೀತಾ–ರಾಮ ದೇವಾಲಯದಲ್ಲಿ ಆಯೋಜಿಸಿದ್ದ 48ನೇ ದಿನದ ಮಂಡಲಪೂಜೆ ವಿಧಿ–ವಿಧಾನಗಳು ವಿಜೃಂಭಣೆಯಿಂದ ನೆರವೇರಿದವು.
ಬೆಳಿಗ್ಗೆಯಿಂದಲೇ ಹೋಮ–ಹವನ, ಸ್ವಾಮಿಗೆ ಅಭಿಷೇಕ, ವಿಶೇಷ ಅಲಂಕಾರ ಸೇರಿ ವಿವಿಧ ಪೂಜಾಕೈಂಕರ್ಯಗಳನ್ನು ನೆರವೇರಿಸಲಾಯಿತು. ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.
ಶಾಸಕ ಎಸ್.ಆರ್.ವಿಶ್ವನಾಥ್, ಸಿಂಗನಾಯಕನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಅಮರಾವತಮ್ಮ, ಸದಸ್ಯರಾದ ಎನ್.ಹರೀಶ್, ಶೋಭಾ ಗೋಪಾಲ್, ಚೈತ್ರ ಕೆಂಪೇಗೌಡ, ಮಾಜಿ ಸದಸ್ಯರಾದ ಅಶೋಕ್, ರಾಮಚಂದ್ರಪ್ಪ, ಗ್ರಾಮದ ಮುಖಂಡರಾದ ನಾರಾಯಣಪ್ಪ, ಗಜೇಂದ್ರ ಮತ್ತಿತರರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.