ಬೆಂಗಳೂರು: ಬೃಂದಾವನ ಲೇಔಟ್ನಲ್ಲಿ ಬಿಬಿಎ ವಿದ್ಯಾರ್ಥಿನಿ ಪ್ರಭುದ್ಯಾ(20) ಅನುಮಾನಾಸ್ಪದವಾಗಿ ಸಾವು ಪ್ರಕರಣದ ತನಿಖೆ ನಡೆಸುತ್ತಿರುವ ಸುಬ್ರಹ್ಮಣ್ಯಪುರ ಠಾಣೆ ಪೊಲೀಸರು ಈಗ ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಆಕೆಯ ತಾಯಿ ಕೆ.ಆರ್.ಸೌಮ್ಯಾ ಅವರು ನೀಡಿದ್ದ ದೂರು ಆಧರಿಸಿ ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದರು.
ಮೇ 15ರಂದು ಸಂಜೆ ಮನೆಯ ಬಾತ್ರೂಂನಲ್ಲಿ ಕತ್ತು ಮತ್ತು ಕೈ ಕೊಯ್ದ ಸ್ಥಿತಿಯಲ್ಲಿ ವಿದ್ಯಾರ್ಥಿನಿಯ ಮೃತದೇಹ ಪತ್ತೆಯಾಗಿತ್ತು. ಆರಂಭದಲ್ಲಿ ಪೊಲೀಸರು, ಅನುಮಾನಸ್ಪದ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದರು. ಈಗ ಐಪಿಸಿ ಸೆಕ್ಷನ್ 302 ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ ಎಂದು ಪೊಲೀಸರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.