ADVERTISEMENT

ನಾಗಮಂಗಲ ಗಲಭೆ ಪ್ರಕರಣ: ಎನ್‌ಐಎ ತನಿಖೆಗೆ ಶೋಭಾ ಕರಂದ್ಲಾಜೆ ಒತ್ತಾಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 19 ಸೆಪ್ಟೆಂಬರ್ 2024, 2:10 IST
Last Updated 19 ಸೆಪ್ಟೆಂಬರ್ 2024, 2:10 IST
ಶೋಭಾ ಕರಂದ್ಲಾಜೆ
ಶೋಭಾ ಕರಂದ್ಲಾಜೆ   

ಬೆಂಗಳೂರು: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆದ ಗಲಭೆಯ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ (ಎನ್‌ಐಎ) ವಹಿಸಬೇಕೆಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಒತ್ತಾಯಿಸಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು, ‘ನಿಷೇಧಿತ ಪಿಎಫ್‌ಐ ಸಂಘಟನೆಯ ಕಾರ್ಯಕರ್ತರು ಗಣೇಶ ಮೆರವಣಿಗೆ ಮೇಲೆ ದಾಳಿ ಮಾಡಿ ಸುಮಾರು 25 ಅಂಗಡಿಗಳಿಗೆ ಬೆಂಕಿ ಹಚ್ಚಿದ ನಾಗಮಂಗಲ ಘಟನೆಯ ಬಗ್ಗೆ ಎನ್‌ಐಎ ತನಿಖೆಗೆ ನಾನು ಒತ್ತಾಯಿಸುತ್ತೇನೆ. ಸ್ಥಳೀಯರು ಅಪರಿಚಿತ ಮುಖಗಳನ್ನು ಗುರುತಿಸಿ ವರದಿ ಮಾಡುತ್ತಾರೆ. ಅಲ್ಲದೆ ಕೇರಳದಿಂದ ಬರುವ ಸಮಾಜ ವಿರೋಧಿ ಶಕ್ತಿಗಳ ಬಗ್ಗೆ ಕಳವಳ ವ್ಯಕ್ತಪಡಿಸುತ್ತಿದ್ದಾರೆ. ಈ ವೈಫಲ್ಯಕ್ಕೆ ಕರ್ನಾಟಕ ಸರ್ಕಾರವೇ ಹೊಣೆಯಾಗಬೇಕು!’ ಎಂದು ಬರೆದುಕೊಂಡಿದ್ದಾರ.

‘ನಾಗಮಂಗಲ ಘಟನೆ ಕೇವಲ ಸ್ಥಳೀಯ ವಿಷಯವಲ್ಲ. ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ಬೆದರಿಕೆಯಾಗಿದೆ. ನಿಷೇಧಿತ ಪಿಎಫ್‌ಐ ಅಶಾಂತಿಯನ್ನು ಹರಡಲು ಪ್ರಯತ್ನಿಸುತ್ತಿದೆ. ನನ್ನ ಮೇಲೆ ಎಫ್‌ಐಆರ್‌ ದಾಖಲಾದ ಬಗ್ಗೆ ನಾನು ಹೆದರುವುದಿಲ್ಲ ಅಥವಾ ಮೌನವಾಗಿರುವುದಿಲ್ಲ, ಅದನ್ನು ಎದುರಿಸುತ್ತೇನೆ. ನ್ಯಾಯವು ಮೇಲುಗೈ ಸಾಧಿಸಬೇಕು, ಹೊಣೆಗಾರರು ನ್ಯಾಯಕ್ಕೆ ತಲೆಬಾಗಬೇಕು’ ಎಂದಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.