ADVERTISEMENT

ಬೆಂಗಳೂರು | ನರ್ಸ್ ಕೊಲೆ ಪ್ರಕರಣ: ಮತ್ತೆ ನಾಲ್ವರ ಬಂಧನ

​ಪ್ರಜಾವಾಣಿ ವಾರ್ತೆ
Published 19 ಜೂನ್ 2024, 16:43 IST
Last Updated 19 ಜೂನ್ 2024, 16:43 IST
   

ಬೆಂಗಳೂರು: ಆಸ್ತಿ ವಿಚಾರಕ್ಕೆ ಹೋಟೆಲ್‌ನ ಸ್ಟಾಫ್ ನರ್ಸ್ ಕೊಲೆ ಮಾಡಿದ್ದ ಪ್ರಕರಣದಲ್ಲಿ ಒಂದೇ ಕುಟುಂಬದ ನಾಲ್ವರು ಆರೋಪಿಗಳನ್ನು ಹೈಗ್ರೌಂಡ್ಸ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪ್ರಕರಣದಲ್ಲಿ ಬಂಧಿತರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ.

ಚಾಮರಾಜಪೇಟೆ ನಿವಾಸಿ ಸೋಮಿನಿ ಸತ್ಯಭಾಮಾ(46) ಅವರನ್ನು ಕೊಲೆ ಮಾಡಲಾಗಿತ್ತು. ಪ್ರಕರಣ ಸಂಬಂಧ ಜೂನ್ 12ರಂದು ಕೊಲೆಯಾದ ಮಹಿಳೆಯ ಅಣ್ಣನ ಮಗ ಚಾಮರಾಜಪೇಟೆ ನಿವಾಸಿಗಳಾದ ಸಾಗರ್(25) ಮತ್ತು ದೂರದ ಸಂಬಂಧಿ ಅಕಾಶ್(26) ಎಂಬುವರನ್ನು ಬಂಧಿಸಲಾಗಿತ್ತು. ಕೃತ್ಯಕ್ಕೆ ಸಂಚು ರೂಪಿಸಿದ್ದ ಆರೋಪದಲ್ಲಿ ಸಾಗರ್, ಶಿವಶಂಕರ್(50), ಗಾಯಿತ್ರಿದೇವಿ(45), ದಿಲೀಪ್(24), ಪೂಜಾ(22) ಎಂಬುವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಸೋಮಿನಿ ಸತ್ಯಭಾಮ ಅವರು ಜೂನ್ 11ರಂದು ರಾತ್ರಿ ಕೆಲಸ ಮುಗಿಸಿ ಮನೆಗೆ ಬರುತ್ತಿದ್ದರು. ಅಲ್ಲಿಗೆ ಬಂದಿದ್ದ ಸಾಗರ್, ಆಕಾಶ್ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಲೆ ಮಾಡಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.