ಬೆಂಗಳೂರು: ಕರ್ನಾಟಕ ಪತ್ರಿಕಾ ವಿತರಕರ ಒಕ್ಕೂಟ ‘ಪ್ರತಿಭಾ ಪುರಸ್ಕಾರ’ಕ್ಕಾಗಿ ಅರ್ಜಿ ಆಹ್ವಾನಿಸಿದೆ.
ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಶೇ 85ಕ್ಕಿಂತ ಅಧಿಕ ಅಂಕ ಪಡೆದಿರುವ ಪತ್ರಿಕಾ ವಿತರಕರು ಹಾಗೂ ಪತ್ರಿಕಾ ವಿತರಕರು, ಹಂಚಿಕೆದಾರರ ಮಕ್ಕಳು ಅರ್ಜಿ ಸಲ್ಲಿಸಬಹುದು.
ಆಸಕ್ತ ವಿದ್ಯಾರ್ಥಿಗಳು ಅರ್ಜಿ ಜತೆಗೆ ಅಂಕಪಟ್ಟಿಯನ್ನೂ ಕಳುಹಿಸಬೇಕು. ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನ.
ಅರ್ಜಿ ಸಲ್ಲಿಸಬೇಕಾದ ವಿಳಾಸ: ಕರ್ನಾಟಕ ಪತ್ರಿಕಾ ವಿತರಕರ ಒಕ್ಕೂಟ, 8 ಮತ್ತು 9, ಮಹಾಲಕ್ಷ್ಮಿ ಪ್ಲಾಝಾ, ಮುನೇಶ್ವರ ಬ್ಲಾಕ್ ಸರಸ್ವತಿಪುರಂ ಮುಖ್ಯರಸ್ತೆ , ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಎದುರು, ಬೆಂಗಳೂರು–560096. ಮಾಹಿತಿಗೆ ಮೊಬೈಲ್: 9972534666 ಸಂಪರ್ಕಿಸಬಹುದು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.