ADVERTISEMENT

Video | ವೀರಯೋಧ ಕ್ಯಾಪ್ಟನ್‌ ಪ್ರಾಂಜಲ್‌ಗೆ ಕರುನಾಡಿನ ಅಂತಿಮ ನಮನ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 25 ನವೆಂಬರ್ 2023, 4:42 IST
Last Updated 25 ನವೆಂಬರ್ 2023, 4:42 IST

ಜಮ್ಮುವಿನ ರಾಜೌರಿಯಲ್ಲಿ ನ.22ರಂದು ಉಗ್ರರ ವಿರುದ್ಧ ನಡೆದ ಗುಂಡಿನ ಚಕಮಕಿಯಲ್ಲಿ ಪ್ರಾಣಾರ್ಪಣೆ ಮಾಡಿದ್ದ ಕರ್ನಾಟಕದ ವೀರಯೋಧ, ಕ್ಯಾಪ್ಟನ್‌ ಎಂ.ವಿ. ಪ್ರಾಂಜಲ್‌ ಅವರ ಪಾರ್ಥಿವ ಶರೀರ ಶುಕ್ರವಾರ ರಾತ್ರಿ ಬೆಂಗಳೂರಿಗೆ ಆಗಮಿಸಿತು. ಪ್ರಾಂಜಲ್‌ ಅವರ ತಂದೆ–ತಾಯಿ, ಪತ್ನಿ ಮತ್ತು ಅತ್ತೆ–ಮಾವ ಅಂತಿಮ ದರ್ಶನ ಪಡೆದರು. ಇದರೊಂದಿಗೆ, ಸೇನಾ ಗೌರವದ ಜೊತೆ, ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್‌, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಅಂತಿಮ ನಮನ ಸಲ್ಲಿಸಿದರು. ಪ್ರಾಂಜಲ್‌ ಅವರ ಜಿಗಣಿ ನಿವಾಸದಲ್ಲಿ ಶನಿವಾರ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.