ADVERTISEMENT

ಕೆಂಗೇರಿ: ಮುನಿರತ್ನ ವಿರುದ್ಧ ಮೌನ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 18 ಸೆಪ್ಟೆಂಬರ್ 2024, 16:35 IST
Last Updated 18 ಸೆಪ್ಟೆಂಬರ್ 2024, 16:35 IST
ಕೆಂಗೇರಿ ಉಪನಗರದ ಹೊಯ್ಸಳ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ಶಾಸಕ ಎಸ್.ಟಿ.ಸೋಮಶೇಖರ್, ವಿಧಾನ ಪರಿಷತ್ ಸದಸ್ಯ ರಾಮೋಜಿ ಗೌಡ, ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಸೌಮ್ಯರೆಡ್ಡಿ,  ಹನುಮಂತರಾಯಪ್ಪ, ಆರ್ಯ ಶ್ರೀನಿವಾಸ್, ಶಿವಮಾದಯ್ಯ, ಬಿ.ಎಚ್.ಪ್ರಭು ಪಾಲ್ಗೊಂಡಿದ್ದರು  
ಕೆಂಗೇರಿ ಉಪನಗರದ ಹೊಯ್ಸಳ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ಶಾಸಕ ಎಸ್.ಟಿ.ಸೋಮಶೇಖರ್, ವಿಧಾನ ಪರಿಷತ್ ಸದಸ್ಯ ರಾಮೋಜಿ ಗೌಡ, ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಸೌಮ್ಯರೆಡ್ಡಿ,  ಹನುಮಂತರಾಯಪ್ಪ, ಆರ್ಯ ಶ್ರೀನಿವಾಸ್, ಶಿವಮಾದಯ್ಯ, ಬಿ.ಎಚ್.ಪ್ರಭು ಪಾಲ್ಗೊಂಡಿದ್ದರು     

ಕೆಂಗೇರಿ: ಕೆಂಗೇರಿಯಲ್ಲೂ ಮುನಿರತ್ನ ವಿರುದ್ಧ ಪ್ರತಿಭಟನೆ ನಡೆಯಿತು.

ಯಶವಂತಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮುಖಂಡರು ಹಾಗೂ ನೂರಾರು ಕಾರ್ಯಕರ್ತರು ಹೊಯ್ಸಳ ಸರ್ಕಲ್ ಬಳಿ ಮೌನ ಪ್ರತಿಭಟನೆ ನಡೆಸಲು ಸಮಾವೇಶಗೊಂಡಿದ್ದರು.

ಸ್ಥಳಕ್ಕೆ ಆಗಮಿಸಿದ ಶಾಸಕ ಎಸ್.ಟಿ.ಸೋಮಶೇಖರ್ ಮಾತನಾಡಲು ಆರಂಭಿಸಿದರು. ಭಾಷಣಕ್ಕೆ ಪೊಲೀಸರು ಅವಕಾಶ ನೀಡಲಿಲ್ಲ. ಬಳಿಕ ಕ್ಷೇತ್ರದ ನಾನಾ ಕಡೆಗಳಿಂದ ಬಂದ ಕಾರ್ಯಕರ್ತರು ಕೆಂಗೇರಿ ಉಪನಗರದ ಹೊಯ್ಸಳ ವೃತ್ತದಿಂದ ಗಣೇಶ ಆಟದ ಮೈದಾನದವರೆಗೆ ಮೌನ ಪ್ರತಿಭಟನೆ ನಡೆಸಿದರು.

ADVERTISEMENT

ಪ್ರತಿಭಟನೆಗೆ ಅನುಮತಿ ಕೇಳಿದ್ದರೂ ಹೋರಾಟ ಹತ್ತಿಕ್ಕಲು ಮುಂದಾಗಿರುವುದು ಸರಿ ಅಲ್ಲ ಎಂದು ಶಾಸಕರು ಅಸಮಾಧಾನ ಹೊರಹಾಕಿದರು.

ಒಕ್ಕಲಿಗ ಹಾಗೂ ದಲಿತ ಸಮುದಾಯದ ಕುರಿತು ಹಾಗೂ ಹೆಣ್ಣು ಮಕ್ಕಳ ಬಗ್ಗೆ ಅವಾಚ್ಯ ಶಬ್ದಗಳನ್ನು ಬಳಸಿರುವುದು ಅಕ್ಷಮ್ಯ ಅಪರಾಧವಾಗಿದೆ. ಈತನ ಹೇಳಿಕೆ ಸಮರ್ಥನೆ ಮಾಡಿಕೊಳ್ಳುವ ಮೂಲಕ ಬಿಜೆಪಿ ಕೀಳುಮಟ್ಟದ ಮನಸ್ಥಿತಿ ಪ್ರದರ್ಶನ ಮಾಡುತ್ತಿದೆ ಎಂದು ಪ್ರತಿಭಟನಕಾರರು ದೂರಿದರು.

ಮುನಿರತ್ನ ಅವರ ಈ ರೀತಿಯ ನಡವಳಿಕೆ ಹೊಸದೇನಲ್ಲ. ಹಲವರ ಮೇಲೆ ‌ಸುಳ್ಳು ಪ್ರಕರಣ ದಾಖಲು ಮಾಡುವುದು, ಅಧಿಕಾರಿಗಳಿಗೆ ಧಮ್ಕಿ ಹಾಕುವುದು ಸಾಮಾನ್ಯವಾಗಿತ್ತು ಎಂದು ಮುಖಂಡ ಹನುಮಂತರಾಯಪ್ಪ ಹೇಳಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.