ಬೆಂಗಳೂರು: ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರನ್ನಾಗಿ ನಿವೃತ್ತ ಐಪಿಎಸ್ ಅಧಿಕಾರಿ ಯು. ನಿಸಾರ್ ಅಹ್ಮದ್ ಅವರನ್ನು ನೇಮಿಸಿ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಶುಕ್ರವಾರ ಆದೇಶ ಹೊರಡಿಸಿದೆ.
ಬಳ್ಳಾರಿ ನಗರದವರಾದ ನಿಸಾರ್ ಅಹ್ಮದ್ ಅವರು ಐಜಿಪಿಯಾಗಿ 2012ರಲ್ಲಿ ನಿವೃತ್ತರಾಗಿದ್ದರು. ಅಬ್ದುಲ್ ಅಜೀಂ ಅವರನ್ನು ಆಯೋಗದ ಅಧ್ಯಕ್ಷರ ಸ್ಥಾನದಿಂದ ವಜಾಗೊಳಿಸಿ ಇತ್ತೀಚೆಗೆ ಆದೇಶ ಹೊರಡಿಸಲಾಗಿತ್ತು. ತೆರವಾದ ಸ್ಥಾನಕ್ಕೆ ನಿಸಾರ್ ಅಹ್ಮದ್ ಅವರನ್ನು ನೇಮಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.